26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

ಬೆಳ್ತಂಗಡಿ: ಕ್ರಿಸ್ತ ಯೇಸುವಿನ ಜನನದ 2025 ನೇ ವರ್ಷದ ಅಂಗವಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನನಿಲಯ ಪಾಲನಾ ಕೇಂದ್ರದಲ್ಲಿ ವಿಶೇಷ ಕಲಿಕಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕೇರಳದ ಪಾಲಕ್ಕಾಡ್ ಧರ್ಮಪ್ರಾಂತ್ಯದ ಯಾಜಕರಾದ ವಂದನೀಯ ಡಾ. ಅರುಣ್ ಕಲಮತ್ತಂರವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

1965 ರಲ್ಲಿ ಕೊನೆಗೊಂಡ ಎರಡನೇ ವಾತಿಕಾನ್ ಮಹಾಸಮ್ಮೇಳನದ ಆಧುನಿಕ ಕಾಲದ ಧರ್ಮಸಭೆಯ ಸಂವಿಧಾನಿಕ ದಾಖಲೆಗಳ ಕುರಿತು ಚರ್ಚಿಸಲಾಯಿತು. ಧರ್ಮಸಭೆಯು ಸಮಾಜದಲ್ಲಿ ಒಳಿತಿನ, ಧಾರ್ಮಿಕತೆಯ ಕಾವಲುಗಾರನಾಗಿರಲು ಎರಡನೇ ವಾತಿಕಾನ್ ಮಹಾಸಮ್ಮೇಳನವು ನಮಗೆ ಆಹ್ವಾನ ನೀಡುತ್ತದೆ. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅತಿ ವಂದನೀಯ ಲಾರೆನ್ಸ್ ಮುಕ್ಕುಜ್ಹಿ ಯವರು ” ಆಧುನಿಕ ಲೋಕಕ್ಕೆ ದಾರಿದೀಪವಾಗಿರುವ ಎರಡನೇ ವಾತಿಕ್ಕಾನ್ ಮಹಾಸಮ್ಮೇಳನದ ದಾಖಲೆಗಳು ಆಳವಾಗಿ ತಿಳಿಯುವುದು ಅನಿವಾರ್ಯ ಹಾಗೂ ಲೋಕ ಸಮಾಧಾನಕ್ಕೆ ಅವಶ್ಯವಾದದ್ದು” ಎಂದರು.

ಧರ್ಮಪ್ರಾಂತ್ಯದ ಎಲ್ಲ ಧರ್ಮಗುರುಗಳು ಹಾಗೂ ಧರ್ಮ ಭಗಿನೀಯರು ಪ್ರಸ್ತುತ ಕಲಿಕಾ ಶಿಬಿರದಲ್ಲಿ ಭಾಗವಹಿಸಿದರು.

Related posts

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya
error: Content is protected !!