May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

ಬೆಳ್ತಂಗಡಿ: ಕ್ರಿಸ್ತ ಯೇಸುವಿನ ಜನನದ 2025 ನೇ ವರ್ಷದ ಅಂಗವಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನನಿಲಯ ಪಾಲನಾ ಕೇಂದ್ರದಲ್ಲಿ ವಿಶೇಷ ಕಲಿಕಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕೇರಳದ ಪಾಲಕ್ಕಾಡ್ ಧರ್ಮಪ್ರಾಂತ್ಯದ ಯಾಜಕರಾದ ವಂದನೀಯ ಡಾ. ಅರುಣ್ ಕಲಮತ್ತಂರವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

1965 ರಲ್ಲಿ ಕೊನೆಗೊಂಡ ಎರಡನೇ ವಾತಿಕಾನ್ ಮಹಾಸಮ್ಮೇಳನದ ಆಧುನಿಕ ಕಾಲದ ಧರ್ಮಸಭೆಯ ಸಂವಿಧಾನಿಕ ದಾಖಲೆಗಳ ಕುರಿತು ಚರ್ಚಿಸಲಾಯಿತು. ಧರ್ಮಸಭೆಯು ಸಮಾಜದಲ್ಲಿ ಒಳಿತಿನ, ಧಾರ್ಮಿಕತೆಯ ಕಾವಲುಗಾರನಾಗಿರಲು ಎರಡನೇ ವಾತಿಕಾನ್ ಮಹಾಸಮ್ಮೇಳನವು ನಮಗೆ ಆಹ್ವಾನ ನೀಡುತ್ತದೆ. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅತಿ ವಂದನೀಯ ಲಾರೆನ್ಸ್ ಮುಕ್ಕುಜ್ಹಿ ಯವರು ” ಆಧುನಿಕ ಲೋಕಕ್ಕೆ ದಾರಿದೀಪವಾಗಿರುವ ಎರಡನೇ ವಾತಿಕ್ಕಾನ್ ಮಹಾಸಮ್ಮೇಳನದ ದಾಖಲೆಗಳು ಆಳವಾಗಿ ತಿಳಿಯುವುದು ಅನಿವಾರ್ಯ ಹಾಗೂ ಲೋಕ ಸಮಾಧಾನಕ್ಕೆ ಅವಶ್ಯವಾದದ್ದು” ಎಂದರು.

ಧರ್ಮಪ್ರಾಂತ್ಯದ ಎಲ್ಲ ಧರ್ಮಗುರುಗಳು ಹಾಗೂ ಧರ್ಮ ಭಗಿನೀಯರು ಪ್ರಸ್ತುತ ಕಲಿಕಾ ಶಿಬಿರದಲ್ಲಿ ಭಾಗವಹಿಸಿದರು.

Related posts

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಮೂಡುಕೋಡಿ ನಿವಾಸಿ ಜಿನ್ನಮ್ಮ ನಿಧನ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!