24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

ಕೊಯ್ಯೂರು: ಕೊಯ್ಯೂರು ಅದೂರು ಪೇರಾಲ್ ಶ್ರೀ ಕೃಷ್ಣ ಭಜನಾ ಮಂಡಳಿ ಹಾಗೂ ಶ್ರೀ ಕೃಷ್ಣ ಮಹಿಳಾ ಭಜನಾ ತಂಡ ಅದೂರು ಪೇರಾಲ್ ಜಂಟಿ ಆಶ್ರಯದಲ್ಲಿ ಭಕ್ತಿಯ ಹೆಜ್ಜೆ ಭಕ್ತರ ಮನದ ಮನೆಗಳತ್ತ ಎಂಬ ನಗರ ಭಜನಾ ಮಂಗಳೋತ್ಸವ ಮತ್ತು ಸತ್ಯ ನಾರಾಯಣ ಪೂಜೆ ಮಾ.1 ರಂದು ರಾತ್ರಿ ಮಂಡಳಿ ವಠಾರದಲ್ಲಿ ನಡೆಯಿತು.

ಬೆಂಗಳೂರು ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ ಹಿಂದು, ಧರ್ಮ ಜಾಗೃತಿ ಮೂಡಿಸಲು ಭಜನಾ ಸಪ್ತಾಹದಂತಹ ಅನೇಕ ಕಾರ್ಯಕ್ರಮದಲ್ಲಿ ಮಕ್ಕಳ ಭಾಗವಹಿಸಿಕೆಯಿಂದ ಸನಾತನ ಧರ್ಮ ಉಳಿಯಲು ಸಾಧ್ಯ ಎಂದು ಹೇಳಿದರು.


ಕೃಷಿಕರಾದ ಪ್ರಚಂಡ ಭಾನು ಭಟ್ ಉಪಸ್ಥಿತರಿದ್ದರು. ಅಮಂತ್ರಿತ ಭಜನಾ ಮಂಡಳಿ ಸದಸ್ಯರಿಂದ ಏಕಕಾಲದಲ್ಲಿ ಕುಣಿತ ಭಜನೆ ನಡೆಯಿತು.


ಕುಣಿತ ಭಜನಾ ಮಂಡಳಿ ರಾಜ್ಯಾಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿ, ಲಿಂಗಪ್ಪಗೌಡ ಬೆರ್ಕೆ ನಿರೂಪಿಸಿ , ವಂದಿಸಿದರು. ಭಜನಾ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಸಂಘದ ಸದಸ್ಯರು, ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಭಕ್ತರು ಮತ್ತಿತರರಿದ್ದರು.

Related posts

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

Suddi Udaya
error: Content is protected !!