28 C
ಪುತ್ತೂರು, ಬೆಳ್ತಂಗಡಿ
August 5, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

ನಾರಾವಿ :ಇಲ್ಲಿಯ ಸತ್ಕಾರ್‌ ಹೋಟೆಲ್‌ ಬಳಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರರಿಗೆ ಗಾಯಗಳಾದ ಘಟನೆ ಮಾ.2 ರಂದು ನಡೆದಿದೆ

ಘಟನೆ ವಿವರ: ಮಾ.2 ರಂದು ನಾರಾವಿ ಗ್ರಾಮದ ಸತ್ಕಾರ್‌ ಹೋಟೆಲ್‌ ಬಳಿ ಕಾರ್ಕಳ-ನಾರಾವಿ-ಗುರುವಾಯನಕೆರೆ ಸಾರ್ವಜನಿಕ ರಸ್ತೆಯಲ್ಲಿ ಅಟೋರಿಕ್ಷಾ ಚಾಲಕ ರವಿಚಂದ್ರ ರವರು ಅಳದಂಗಡಿ ಕಡೆಯಿಂದ ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ಬೈಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ರಮೇಶ್ ಮೂಲ್ಯ ರವರ ಬಲಕೈ, ಬಲಕಾಲಿಗೆ, ಬಲಬದಿ ಹಣೆಗೆ ತರಚಿದ ಗಾಯ ಹಾಗೂ ಸಹ ಸವಾರ ಮಂಜುನಾಥರವರ ಬಲಕಾಲಿಗೆ ಮುರಿತದ ಗಾಯ ಮತ್ತು ಬಲಕೈಗೆ ತರಚಿದ ಗಾಯ ಉಂಟಾಗಿ ಹೆಚ್ಚು ಗಾಯಗೊಂಡ ಸಹ ಸವಾರ ಮಂಜುನಾಥರವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಜ್ಞಾನವಿಕಾಸ ಕೇಂದ್ರದ ಸಂಯೋಜಕೀಯರ ಸಭೆ

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!