September 6, 2026
Uncategorized

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

ಮುಂಡಾಜೆ: ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡವನ್ನು ವಸೂಲಿ ಮಾಡಿದ ಘಟನೆ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಮುಂಡಾಜೆ ಗ್ರಾಪಂ ವ್ಯಾಪ್ತಿಯ ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸವನ್ನು ತಂದು ಹಾಕಲಾಗಿತ್ತು.ಈ ಕಸದಲ್ಲಿ ಸಿಕ್ಕ ಕೆಲವು ಪತ್ರ,ದಾಖಲೆ ಇತ್ಯಾದಿಗಳನ್ನು ಪರಿಶೀಲಿಸಿದಾಗ ಇದು ಕಕ್ಕಿಂಜೆ ಕಡೆಯ ವ್ಯಕ್ತಿಗಳು ತಂದು ಹಾಕಿರುವುದಕ್ಕೆ ಪುರಾವೆ ಸಿಕ್ಕಿತ್ತು. ಹಾಗೂ ಈ ದೃಶ್ಯ ಇತ್ತೀಚೆಗೆ ಸೇತುವೆಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿತ್ತು.ಕಸ ಸುರಿದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಸ್ಥಳಕ್ಕೆ ಕರೆಯಿಸಿ ಅವರಿಂದಲೇ ವಿಲೇವಾರಿ ಮಾಡಿಸಿ ಪಂಚಾಯಿತಿ ವತಿಯಿಂದ 2000 ರೂ. ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ ಹಾಗೂ ಪಿಡಿಒ ಗಾಯತ್ರಿ ಪಿ. ತಿಳಿಸಿದ್ದಾರೆ.

ಮುಂಡಾಜೆ ಹಾಗೂ ಕಲ್ಮಂಜ ಗ್ರಾಮ ಪಂಚಾಯಿತಿಗೆ ಸೇರಿದ ಇಲ್ಲಿನ ಹಳೆ ಮತ್ತು ಹೊಸ ಸೇತುವೆ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಕಸ ಸಂಗ್ರಹವಾಗಿದ್ದು ಅದು ನದಿ ನೀರು ಆತಂಕ ವ್ಯಕ್ತವಾಗಿತ್ತು. ಗ್ರಾಮಸಭೆಯಲ್ಲೂ ಈ ವಿಚಾರ ಭಾರಿ ಚರ್ಚೆಗೊಳಗಾಗಿತ್ತು. ಬಳಿಕ ಕಳೆದ ವಾರ ಇಲ್ಲಿ ಸ್ವಚ್ಛತೆ ಕಾರ್ಯವನ್ನು 2 ಪಂಚಾಯಿತಿಗಳ ವತಿಗಳಿಂದ ನಿರ್ವಹಿಸಿ ಸೇತುವೆಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Related posts

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya
error: Content is protected !!