July 23, 2026
Uncategorized

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

ಮುಂಡಾಜೆ: ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡವನ್ನು ವಸೂಲಿ ಮಾಡಿದ ಘಟನೆ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಮುಂಡಾಜೆ ಗ್ರಾಪಂ ವ್ಯಾಪ್ತಿಯ ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸವನ್ನು ತಂದು ಹಾಕಲಾಗಿತ್ತು.ಈ ಕಸದಲ್ಲಿ ಸಿಕ್ಕ ಕೆಲವು ಪತ್ರ,ದಾಖಲೆ ಇತ್ಯಾದಿಗಳನ್ನು ಪರಿಶೀಲಿಸಿದಾಗ ಇದು ಕಕ್ಕಿಂಜೆ ಕಡೆಯ ವ್ಯಕ್ತಿಗಳು ತಂದು ಹಾಕಿರುವುದಕ್ಕೆ ಪುರಾವೆ ಸಿಕ್ಕಿತ್ತು. ಹಾಗೂ ಈ ದೃಶ್ಯ ಇತ್ತೀಚೆಗೆ ಸೇತುವೆಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿತ್ತು.ಕಸ ಸುರಿದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಸ್ಥಳಕ್ಕೆ ಕರೆಯಿಸಿ ಅವರಿಂದಲೇ ವಿಲೇವಾರಿ ಮಾಡಿಸಿ ಪಂಚಾಯಿತಿ ವತಿಯಿಂದ 2000 ರೂ. ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ ಹಾಗೂ ಪಿಡಿಒ ಗಾಯತ್ರಿ ಪಿ. ತಿಳಿಸಿದ್ದಾರೆ.

ಮುಂಡಾಜೆ ಹಾಗೂ ಕಲ್ಮಂಜ ಗ್ರಾಮ ಪಂಚಾಯಿತಿಗೆ ಸೇರಿದ ಇಲ್ಲಿನ ಹಳೆ ಮತ್ತು ಹೊಸ ಸೇತುವೆ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಕಸ ಸಂಗ್ರಹವಾಗಿದ್ದು ಅದು ನದಿ ನೀರು ಆತಂಕ ವ್ಯಕ್ತವಾಗಿತ್ತು. ಗ್ರಾಮಸಭೆಯಲ್ಲೂ ಈ ವಿಚಾರ ಭಾರಿ ಚರ್ಚೆಗೊಳಗಾಗಿತ್ತು. ಬಳಿಕ ಕಳೆದ ವಾರ ಇಲ್ಲಿ ಸ್ವಚ್ಛತೆ ಕಾರ್ಯವನ್ನು 2 ಪಂಚಾಯಿತಿಗಳ ವತಿಗಳಿಂದ ನಿರ್ವಹಿಸಿ ಸೇತುವೆಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Related posts

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya
error: Content is protected !!