May 7, 2026
Uncategorized

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

ಮುಂಡಾಜೆ: ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡವನ್ನು ವಸೂಲಿ ಮಾಡಿದ ಘಟನೆ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಮುಂಡಾಜೆ ಗ್ರಾಪಂ ವ್ಯಾಪ್ತಿಯ ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸವನ್ನು ತಂದು ಹಾಕಲಾಗಿತ್ತು.ಈ ಕಸದಲ್ಲಿ ಸಿಕ್ಕ ಕೆಲವು ಪತ್ರ,ದಾಖಲೆ ಇತ್ಯಾದಿಗಳನ್ನು ಪರಿಶೀಲಿಸಿದಾಗ ಇದು ಕಕ್ಕಿಂಜೆ ಕಡೆಯ ವ್ಯಕ್ತಿಗಳು ತಂದು ಹಾಕಿರುವುದಕ್ಕೆ ಪುರಾವೆ ಸಿಕ್ಕಿತ್ತು. ಹಾಗೂ ಈ ದೃಶ್ಯ ಇತ್ತೀಚೆಗೆ ಸೇತುವೆಗೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿತ್ತು.ಕಸ ಸುರಿದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಸ್ಥಳಕ್ಕೆ ಕರೆಯಿಸಿ ಅವರಿಂದಲೇ ವಿಲೇವಾರಿ ಮಾಡಿಸಿ ಪಂಚಾಯಿತಿ ವತಿಯಿಂದ 2000 ರೂ. ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ ಹಾಗೂ ಪಿಡಿಒ ಗಾಯತ್ರಿ ಪಿ. ತಿಳಿಸಿದ್ದಾರೆ.

ಮುಂಡಾಜೆ ಹಾಗೂ ಕಲ್ಮಂಜ ಗ್ರಾಮ ಪಂಚಾಯಿತಿಗೆ ಸೇರಿದ ಇಲ್ಲಿನ ಹಳೆ ಮತ್ತು ಹೊಸ ಸೇತುವೆ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಕಸ ಸಂಗ್ರಹವಾಗಿದ್ದು ಅದು ನದಿ ನೀರು ಆತಂಕ ವ್ಯಕ್ತವಾಗಿತ್ತು. ಗ್ರಾಮಸಭೆಯಲ್ಲೂ ಈ ವಿಚಾರ ಭಾರಿ ಚರ್ಚೆಗೊಳಗಾಗಿತ್ತು. ಬಳಿಕ ಕಳೆದ ವಾರ ಇಲ್ಲಿ ಸ್ವಚ್ಛತೆ ಕಾರ್ಯವನ್ನು 2 ಪಂಚಾಯಿತಿಗಳ ವತಿಗಳಿಂದ ನಿರ್ವಹಿಸಿ ಸೇತುವೆಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Related posts

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya
error: Content is protected !!