May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕಣಿಯೂರು ನಿವಾಸಿ ವಿವಾಹಿತ ಮಹಿಳೆಯೋರ್ವರು ಬೆಂಗಳೂರು ಸಂಬಂಧಿಕರ ಮನೆಯಲ್ಲಿ ಮಾ.1ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕು ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ (23 ) ಮೃತಪಟ್ಟಾಕೆ.

ಪೂಜಾ ಅವರು ವಿದ್ಯಾವಂತೆಯಾಗಿದ್ದು ಉದ್ಯೋಗ ಅರಸಿ ಕಳೆದ 2 ತಿಂಗಳ ಹಿಂದೆ ಬೆಂಗಳೂರಿಗೆ ತೆರಳುವವರಿದ್ದರು. ಅವರನ್ನು ತಮ್ಮ ಸಂಬಂಧಿಕರ ಮನೆ ಬೆಂಗಳೂರಿಗೆ ಪತಿ ಪ್ರಕಾಶ್ ಕಳುಹಿಸಿಕೊಟ್ಟಿದ್ದರು. ಪತಿ ಪ್ರಕಾಶ್ ಬದ್ಯಾರು ಬರಾಯ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು.

ಪೂಜಾ ಅವರು ಮೂಲತಃ ಕಣಿಯೂರು ಗ್ರಾಮದ ನೆಲ್ಲಿ ಬಾಕಿಮಾರು ಮನೆಯ ವಾರಿಜಾ ಹಾಗೂ ಸೇಸಪ್ಪ ಪೂಜಾರಿ ದಂಪತಿy ಪುತ್ರಿಯಾಗಿದ್ದು 10 ತಿಂಗಳ ಹಿಂದೆ ಮದುವೆ ಮಾಡಿ ಕೊಟ್ಟಿದ್ದಾರು. ಮೃತಳ ಸಾವಿನ ಬಗ್ಗೆ ಸಂಶಯಾಸ್ಪದವಾಗಿದೆ ಎಂದು ತಾಯಿ, ತಂದೆ ಅಭಿಪ್ರಾಯ ಪಟ್ಟು ಮನೆಯಲ್ಲೆ ಅಂತ್ಯಕ್ರಿಯೆ ನಡೆಸಿದ್ದರು.

ಬೆಂಗಳೂರು ಜಾಲಹಳ್ಳಿ ಬಾಗಲಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya
error: Content is protected !!