24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಾಗಿ ಬರುತ್ತಿದ್ದ ನಾನು ಇಂದು ಅತಿಥಿಯಾಗಿರುವುದು ಸಂತಸ ತಂದಿದೆ. ಆಭರಣ ಖರೀದಿಗೆಂದು ಚಿಂತಿಸಿದಾಗ ಮನದಲ್ಲಿ ಬರುವುದು ಮುಳಿಯ ಸಂಸ್ಥೆ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ನಲ್ಲಿ ಮಾ 3ರಂದು ನಡೆದ ಡೈಮಾಂಡ್ ಪೆಸ್ಟ್ ಚಾಲನೆ ಸಮಾರಂಭದಲ್ಲಿ ಮಾತನಾಡಿದರು.

ಜೇಸಿಐ ಭಾರತದ ವಲಯ 15 ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80 ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ. ಚಿನ್ನಾಭಾರಣಗಳಲ್ಲಿ ಉತ್ತಮ ಗುಣ ಮಟ್ಟವನ್ನು ನೀಡುತ್ತಾ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ವ್ಯವಹಾರಕ್ಕೆ ಸಾಮಾಜಿಕವಾಗಿ ತೊಡಗಿಸಿಕೊಂಡು ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಸಂಸ್ಥೆ ಮುಳಿಯ ಎಂದು ಅಭಿಪ್ರಾಯಪಟ್ಟರು.

ಮಾರ್ಕೇಟಿಂಗ್ ಕನ್ಸಲ್‌ಟೆಂಟ್ ವೇಣು ಶರ್ಮ ಮಾತನಾಡಿ, ಚಿನ್ನಭಾರಣ ಸುರಕ್ಷಿತ ಹೂಡಿಕೆಯ ಉದ್ಯಮವಾಗಿದೆ. ವಿಶಿಷ್ಟ ಹಾಗೂ ವಿನೂತನ ವಜ್ರಭಾರಣಗಳ ಸಂಗ್ರಹಣೆ ಈ ಬಾರಿಯ ಡೈಮಾಂಡ್ ಫೆಸ್ಟ್ನಲ್ಲಿದೆ. ಜೀವನದ ಮೊದಲ ವಜ್ರಾಭರಣ ಖರೀದಿಯನ್ನು ಮುಳಿಯೊಂದಿಗೆ ಪ್ರಾರಂಭಿಸಿ ಎಂದು ಹೇಳಿದರು.


ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗವದರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್ ಸ್ವಾಗತಿಸಿ, ಸಿಬ್ಬಂದಿ ಅಶ್ವಥ್ ವಂದಿಸಿ, ಕನ್ನಿಕಾ ನಿರೂಪಿಸಿದರು.

Related posts

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

Suddi Udaya

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!