25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

ಮೂಡುಕೋಡಿ : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೂಡುಕೋಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಡುಕೋಡಿ , ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟ ಮೂಡುಕೋಡಿ ಜನಜಾಗೃತಿ ಗ್ರಾಮ ಸಮಿತಿ ಮೂಡುಕೋಡಿ, ಶೌರ್ಯ ವಿಪತ್ತು ಘಟಕ ಮೂಡುಕೋಡಿ ಹಾಗೂ ಶ್ರೀ ರಾಮ ಭಜನಾ ಮಂಡಳಿ ನಡ್ತಿಕಲ್ಲು ಮೂಡುಕೋಡಿ ಇವುಗಳ ಆಶ್ರಯದಲ್ಲಿ ನಡ್ತಿಕಲ್ಲು ಶ್ರೀ ರಾಮ ಭಜನಾ ಮಂದಿರದ ಸಭಾ ಭವನದಲ್ಲಿ 15 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರಗಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಧರ್ಮಸ್ಥಳ ಗ್ರಾಮಾಬಿವೃದ್ದಿ ಯೋಜನೆ ಜಿಲ್ಲಾ ನಿದೇರ್ಶಕರಾದ ಮಹಾಬಲ ಕುಲಾಲ್ , ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸುನೀತಾ ಬಿ., ವೇಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉಮೇಶ ನಡ್ತಿಕಲ್ಲು, ಗ್ರಾಮ ಪಂಚಾಯತ್ ಸದಸ್ಯೆ ವೀಣಾ ದೇವಾಡಿಗ , ಒಕ್ಕೂಟ ಅಧ್ಯಕ್ಷ ಹರೀಶ್ ಪೂಜಾರಿ, ನಳಿನಾಕ್ಷಿ, ಭಜನಾ ಮಂದಿರದ ಅಧ್ಯಕ್ಷ ಪ್ರವೀಣ್ ಆಚಾರ್ಯ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಪಿ. ಯಸ್. ಉಪಸ್ಥಿತರಿದ್ದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಪೂಜಾ ಸಮಿತಿ ಅಧ್ಯಕ್ಷ ಜಯಂತ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಮೇಲ್ವಿಚಾರಕಿ ಶಾಲಿನಿ ಮಾಡಿದರು, ಸುಪ್ರೀತಾ ಸ್ವಾಗತಿಸಿದರು. ಸೇವಾಪ್ರತಿನಿಧಿ ಜಲಜರವರು ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!