28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಕಾರ್ಯಕ್ರಮವು ನಡೆಯಿತು.

ಯೋಜನೆಯ ಮಾನವ ಸಂಪನ್ಮೂಲ ಮತ್ತು ಸಿಬ್ಬಂದಿ ನಿರ್ವಹಣಾ ವಿಭಾಗದ ನಿರ್ದೇಶಕ ಸುರೇಶ್ ಮೊಯಿಲಿ ಇವರು ಮಾತನಾಡಿ ಮಹಿಳೆಯರು ದಿನದಲ್ಲಿ 18 ಗಂಟೆ ಮನೆಯಲ್ಲಿ ದುಡಿದರೂ ಕೂಡ ಯಾವುದೇ ಗೌರವ ಸನ್ಮಾನಗಳು ದೊರೆಯುವುದಿಲ್ಲ. ಅದೇ ಮಹಿಳೆಯರು ಇತರರಿಗೆ ಅವಲಂಬಿಸದೆ ಸ್ವಂತ ಉದ್ದಿಮೆ ಮಾಡಿದಾಗ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬಹುದು. ಸಮಾಜದಲ್ಲಿ ಗೌರವ ಹಾಗೂ ಸ್ವಾವಲಂಬಿ ಬದುಕನ್ನು ಕಾಣಬಹುದು. ಇಂತಹ ತರಬೇತಿಗಳು ಬಹು ಬೇಡಿಕೆ ಇರುವ ಹಾಗೂ ಕಡಿಮೆ ಸಮಯದಲ್ಲಿ ಹೆಚ್ಚು ಸಂಪಾದನೆ ಮಾಡುವ ಸ್ವ ಉದ್ಯೋಗವಾಗಿದೆ ಎಂದರು. ನಂತರ ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.

ಒಟ್ಟು 21 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್ ಕೆ, ಸಂಪನ್ಮೂಲ ವ್ಯಕ್ತಿ ತುಳಸಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತರಬೇತಿ ಸಂಯೋಜಕರಾದ ಜಯಶ್ರೀ ಕಾರ್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕ ದೀಪಕ್ ಎ.ಎಸ್. ಲೋಕಸಭಾ ಸಂಸದ ಬ್ರಿಜೇಶ್ ಚೌಟರ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ರೆಖ್ಯದಲ್ಲಿ ಕಾಡಾನೆ ದಾಳಿ: ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ

Suddi Udaya
error: Content is protected !!