26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

ಉಜಿರೆ: “ಬೆಂಕಿ ಅವಘಡಗಳು ಹಾಗೂ ಆರೋಗ್ಯದ ಕುರಿತ ಜಾಗೃತಿ, ಮುಂಜಾಗೃತ ಕ್ರಮಗಳನ್ನು ತಿಳಿದಿರುವುದು ಅತ್ಯವಶ್ಯಕ. ಪ್ರತಿಯೊಬ್ಬರೂ ಅವರವರ ಮನೆ, ಸುತ್ತಮುತ್ತಲಿನ ವಸ್ತು, ಜನ, ಪ್ರಾಣಿ-ಪಕ್ಷಿಗಳನ್ನು ಇಂತಹ ತುರ್ತು ಸಮಯದಲ್ಲಿ ಕಾಪಾಡಿಕೊಳ್ಳುವುದು ಕರ್ತವ್ಯವಾಗಿದೆ” ಎಂದು ಮಂಗಳೂರಿನ ಫೈರ್ ಸೇಫ್ಟಿ ಹಾಗೂ ಹೆಲ್ತ್ ಸೇಫ್ಟಿ ಯ ತರಬೇತುದಾರರಾದ ಸತ್ಯರಾಜ್, ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾಹಿತಿ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಸಿ.ಬಿ.ಎಸ್.ಇ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ವೇದಿಕೆಯಲ್ಲಿ ಎಸ್.ಡಿ.ಎಮ್ ಸೆಕೆಂಡರಿ ಅನುದಾನಿತ ಶಾಲೆಯ ಮುಖ್ಯೋಪಾಧ್ಯಾಯರಾದ ಸುರೇಶ್, ಶಿಕ್ಷಕ ಮೋನಪ್ಪ ಹಾಗೂ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕಿ ಶಾಂಟಿ ಜಾರ್ಜ್ ಇವರು ಉಪಸ್ಥಿತರಿದ್ದರು.

ಶಿಕ್ಷಕ ಗಣೇಶ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕ ಕಿರಣ್‌ರಾಜ್ ನಿರೂಪಿಸಿದರು.

Related posts

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

Suddi Udaya

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

Suddi Udaya
error: Content is protected !!