25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

ಉಜಿರೆ: “ಬೆಂಕಿ ಅವಘಡಗಳು ಹಾಗೂ ಆರೋಗ್ಯದ ಕುರಿತ ಜಾಗೃತಿ, ಮುಂಜಾಗೃತ ಕ್ರಮಗಳನ್ನು ತಿಳಿದಿರುವುದು ಅತ್ಯವಶ್ಯಕ. ಪ್ರತಿಯೊಬ್ಬರೂ ಅವರವರ ಮನೆ, ಸುತ್ತಮುತ್ತಲಿನ ವಸ್ತು, ಜನ, ಪ್ರಾಣಿ-ಪಕ್ಷಿಗಳನ್ನು ಇಂತಹ ತುರ್ತು ಸಮಯದಲ್ಲಿ ಕಾಪಾಡಿಕೊಳ್ಳುವುದು ಕರ್ತವ್ಯವಾಗಿದೆ” ಎಂದು ಮಂಗಳೂರಿನ ಫೈರ್ ಸೇಫ್ಟಿ ಹಾಗೂ ಹೆಲ್ತ್ ಸೇಫ್ಟಿ ಯ ತರಬೇತುದಾರರಾದ ಸತ್ಯರಾಜ್, ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾಹಿತಿ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಸಿ.ಬಿ.ಎಸ್.ಇ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ವೇದಿಕೆಯಲ್ಲಿ ಎಸ್.ಡಿ.ಎಮ್ ಸೆಕೆಂಡರಿ ಅನುದಾನಿತ ಶಾಲೆಯ ಮುಖ್ಯೋಪಾಧ್ಯಾಯರಾದ ಸುರೇಶ್, ಶಿಕ್ಷಕ ಮೋನಪ್ಪ ಹಾಗೂ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕಿ ಶಾಂಟಿ ಜಾರ್ಜ್ ಇವರು ಉಪಸ್ಥಿತರಿದ್ದರು.

ಶಿಕ್ಷಕ ಗಣೇಶ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕ ಕಿರಣ್‌ರಾಜ್ ನಿರೂಪಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya
error: Content is protected !!