25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

ಬೆಳ್ತಂಗಡಿ: ಎಲೆಚುಕ್ಕಿ ರೋಗದಲ್ಲಿ ಸುಳ್ಯ-ಪುತ್ತೂರು ಭಾಗದ ರೈತರು ಬೆಲೆ ನಾಶದಿಂದ ಹೈರಾಣಗಿದ್ದಾರೆ. ರೋಗಕ್ಕೆ ಸಮರ್ಪಕವಾಗಿ ಮದ್ದುಗಳು ತೋಟಗಾರಿಕೆ ಇಲಾಖೆಯಲ್ಲಿ ಸಿಗುತ್ತಿಲ್ಲ. ಪೋಷಕಾಂಶಗಳನ್ನು ನೀಡುತ್ತಿಲ್ಲ. ಔಷಧಿಗಳ ಕೊರತೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದರು.

ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದ ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಎಲೆ ಚುಕ್ಕಿ ರೋಗದ ಕುರಿತು ಧ್ವನಿ ಎತ್ತಿ, ಕೇಂದ್ರದಿಂದ ಅನುದಾನ ಬಂದರು ರೈತರ ಕೈಗೆ ಸೇರಿಲ್ಲ. ರಾಜ್ಯದಿಂದಲೂ ಅನುದಾನ ಶೀಘ್ರವಾಗಿ ಒದಗಿಸಬೇಕು ಈ ಸಮಸ್ಯೆಯನ್ನು ಬಗೆಹರಿಸಬೇಕು ಆಗ್ರಹಿಸಿದರು. ಶೀಲಿಂದ್ರ ಸಮರ್ಪಕವಾಗಿ ದೊರಕುತ್ತಿಲ್ಲ. ಗುಣ ಮಟ್ಟದ ಸುಣ್ಣ ಸಿಗುತ್ತಿಲ್ಲ. ಸರಕಾರ ರೋಗಗಕ್ಕೆ ಔಷಧಿ ಕಂಡುಕೊಳ್ಳಲು ಸುಮಾರು 50 ಲಕ್ಷ ಖರ್ಚು ಮಾಡಲಾಗಿದೆ. ಆದರೆ ವರದಿ ಇನ್ನೂ ಬಂದಿಲ್ಲ. ಪರ್ಯಾಯ ಬೆಳೆಗೆ ಕಾಫಿ ಸೂಚಿಸಿದ್ದು ಇನ್ನೂ ಶಕ್ತಿ ತುಂಬು ಕಾರ್ಯವಾಗಿಲ್ಲ. ಕೇಂದ್ರದಿಂದ ಅನುದಾನ ಬಂದರು ರಾಜ್ಯ ಸರಕಾರ ಅನುದಾನ ಮಂಜೂರು ಮಾಡಲು ತಡವರಿಸುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದರು. ಅವರೊಂದಿಗೆ ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಧ್ವನಿಗೂಡಿಸಿದರು.

ಕೇಂದ್ರದಿಂದ ಅನುದಾನ ಬಂದಿದ್ದು ರಾಜ್ಯದ ಅನುದಾನ ಜೋಡಿಕರಣ ಪ್ರಕ್ರಿಯೆ ಮಾಡಲಾಗುತ್ತಿದ್ದು ಶೀಘ್ರವೇ ನೀಡಲು ತಯಾರಿ ಮಾಡುತ್ತಿದ್ದೇವೆ. ಒಂದು ಹೇಕ್ಟೆರ್‌ಗೆ 1,200 ರೂ. ನೀಡುತ್ತಿದ್ದು ಅದು ಕಡಿಮೆ ಆಗುತ್ತದೆ ಎಂದು ಕೇಂದ್ರಕ್ಕೆ ಹೆಚ್ಚುವರಿ ಮಾಡುವಂತೆ ಮನವಿ ಕಳುಹಿಸಲಾಗಿದೆ ಎಂದು ತೋಟಗಾರಿಕಾ ಇಲಾಖಾ ಸಚಿವರು ಉತ್ತರಿಸಿದರು.

Related posts

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ, ಶಾಲೆಯಲ್ಲಿ ಮಾನವ ಹಕ್ಕುಗಳ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ಸಿಯೋನ್ ಆಶ್ರಮದಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!