March 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

ಕೊಯ್ಯೂರು : “ಶ್ರದ್ಧಾಕೇಂದ್ರಗಳು ಮತ್ತು ಶಾಲೆಗಳ ಅಭಿವೃದ್ಧಿಯಾದರೆ ಊರಿನ ಅಭಿವೃದ್ಧಿಯಾದಂತೆ ” ಎಂಬುದಾಗಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಅಭಿಪ್ರಾಯಪಟ್ಟರು.

ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಂಸ್ಥೆಯ ಮೂಲಸೌಕರ್ಯ ಅಭಿವೃದ್ಧಿ ಮತ್ತು ಆವರಣ ಗೋಡೆ ಕಾಮಗಾರಿಯ ನಿರ್ವಹಣೆಗೆ ಸಂಪೂರ್ಣ ಸಹಕಾರ ನೀಡುವ ಬಗ್ಗೆ ವಾಗ್ದಾನ ಮಾಡಿದರು. ಅಲ್ಲದೇ ಮುoದಿನ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಪ್ರಾರಂಭೋತ್ಸವವನ್ನು ಗ್ರಾಮಸ್ಥರ ಸಹಕಾರದೊಂದಿಗೆ ಅದ್ದೂರಿಯಾಗಿ ನಡೆಸುವ ಬಗ್ಗೆ ಸಂಕಲ್ಪಗೈದರು.


ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇನ್ನೋರ್ವ ಮುಖ್ಯ ಅತಿಥಿ ಬೆಂಗಳೂರಿನ ಉದ್ಯಮಿ ಕಿರಣ್ ಡಿ. ಪುಷ್ಪಗಿರಿ, ಉರುವಾಲು, ಮಾತನಾಡಿ ಸಂಸ್ಥೆಗೆ ಒಂದು ಸಭಾಂಗಣದ ಅವಶ್ಯಕತೆಯ ಬಗ್ಗೆ ಅಭಿಪ್ರಾಯಪಟ್ಟರು.ಅಂತೆಯೇ ಸಂಸ್ಥೆಯ ಅಭಿವೃದ್ಧಿಗಾಗಿ ಸರ್ವರೀತಿಯ ಸಹಕಾರದ ಭರವಸೆಯನ್ನಿತ್ತರು. ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾಮಪಂಚಾಯತ್ ಉಪಾಧ್ಯಕ್ಷ ಹರೀಶ್ ಬಜಿಲ, ಸದಸ್ಯರಾದ ಯಶವಂತ ಪೂರ್ಯಾಳ, ಶ್ರೀಮತಿ ಹೇಮಾವತಿ ಕಡಮ್ಮಜೆ, ಕೊಯ್ಯೂರು ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಧಾ ಕೃಷ್ಣ ತಚ್ಛಮೆ ಉಪಸ್ಥಿತರಿದ್ದರು.

ಸಮಾಲೋಚನೆ ಸಭೆಯಲ್ಲಿ ಕೊಯ್ಯೂರು ಪ್ಯಾಕ್ಸ್ ನಿರ್ದೇಶಕರುಗಳು, ಹಾಲು ಉತ್ಪಾದಕರ ಸಂಘದ ನಿರ್ದೇಶಕರುಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಪ್ರೌಢ ಶಾಲಾ ಶಿಕ್ಷಕ ವೃಂದ, ಪೋಷಕರು ಭಾಗವಹಿಸಿ ಸಂಸ್ಥೆಯ ಅಭಿವೃದ್ಧಿ ಬಗ್ಗೆ ಸಲಹೆ -ಸೂಚನೆಗಳನ್ನಿತ್ತರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ದಿವ ಕೊಕ್ಕಡ ತಮ್ಮ ಅಭಿಪ್ರಾಯ ಮಂಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಮೋಹನ ಗೌಡ ಪ್ರಸ್ತಾವನೆಯೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ವಂದಿಸಿದರು. ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Related posts

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!