July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

ಕೊಯ್ಯೂರು : “ಶ್ರದ್ಧಾಕೇಂದ್ರಗಳು ಮತ್ತು ಶಾಲೆಗಳ ಅಭಿವೃದ್ಧಿಯಾದರೆ ಊರಿನ ಅಭಿವೃದ್ಧಿಯಾದಂತೆ ” ಎಂಬುದಾಗಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಅಭಿಪ್ರಾಯಪಟ್ಟರು.

ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಂಸ್ಥೆಯ ಮೂಲಸೌಕರ್ಯ ಅಭಿವೃದ್ಧಿ ಮತ್ತು ಆವರಣ ಗೋಡೆ ಕಾಮಗಾರಿಯ ನಿರ್ವಹಣೆಗೆ ಸಂಪೂರ್ಣ ಸಹಕಾರ ನೀಡುವ ಬಗ್ಗೆ ವಾಗ್ದಾನ ಮಾಡಿದರು. ಅಲ್ಲದೇ ಮುoದಿನ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಪ್ರಾರಂಭೋತ್ಸವವನ್ನು ಗ್ರಾಮಸ್ಥರ ಸಹಕಾರದೊಂದಿಗೆ ಅದ್ದೂರಿಯಾಗಿ ನಡೆಸುವ ಬಗ್ಗೆ ಸಂಕಲ್ಪಗೈದರು.


ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇನ್ನೋರ್ವ ಮುಖ್ಯ ಅತಿಥಿ ಬೆಂಗಳೂರಿನ ಉದ್ಯಮಿ ಕಿರಣ್ ಡಿ. ಪುಷ್ಪಗಿರಿ, ಉರುವಾಲು, ಮಾತನಾಡಿ ಸಂಸ್ಥೆಗೆ ಒಂದು ಸಭಾಂಗಣದ ಅವಶ್ಯಕತೆಯ ಬಗ್ಗೆ ಅಭಿಪ್ರಾಯಪಟ್ಟರು.ಅಂತೆಯೇ ಸಂಸ್ಥೆಯ ಅಭಿವೃದ್ಧಿಗಾಗಿ ಸರ್ವರೀತಿಯ ಸಹಕಾರದ ಭರವಸೆಯನ್ನಿತ್ತರು. ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾಮಪಂಚಾಯತ್ ಉಪಾಧ್ಯಕ್ಷ ಹರೀಶ್ ಬಜಿಲ, ಸದಸ್ಯರಾದ ಯಶವಂತ ಪೂರ್ಯಾಳ, ಶ್ರೀಮತಿ ಹೇಮಾವತಿ ಕಡಮ್ಮಜೆ, ಕೊಯ್ಯೂರು ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಧಾ ಕೃಷ್ಣ ತಚ್ಛಮೆ ಉಪಸ್ಥಿತರಿದ್ದರು.

ಸಮಾಲೋಚನೆ ಸಭೆಯಲ್ಲಿ ಕೊಯ್ಯೂರು ಪ್ಯಾಕ್ಸ್ ನಿರ್ದೇಶಕರುಗಳು, ಹಾಲು ಉತ್ಪಾದಕರ ಸಂಘದ ನಿರ್ದೇಶಕರುಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಪ್ರೌಢ ಶಾಲಾ ಶಿಕ್ಷಕ ವೃಂದ, ಪೋಷಕರು ಭಾಗವಹಿಸಿ ಸಂಸ್ಥೆಯ ಅಭಿವೃದ್ಧಿ ಬಗ್ಗೆ ಸಲಹೆ -ಸೂಚನೆಗಳನ್ನಿತ್ತರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ದಿವ ಕೊಕ್ಕಡ ತಮ್ಮ ಅಭಿಪ್ರಾಯ ಮಂಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಮೋಹನ ಗೌಡ ಪ್ರಸ್ತಾವನೆಯೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ವಂದಿಸಿದರು. ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Related posts

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ :ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಸಮಯ ಪ್ರಜ್ಞೆಯಿದ್ದರೆ ಜೀವನದಲ್ಲಿ ಯಶಸ್ಸು- ಡಾ. ಎಸ್.ಎನ್.ವಿ.

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya
error: Content is protected !!