ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

ಬೆಳ್ತಂಗಡಿ: ಕಳೆದ 16 ವರ್ಷಗಳಿಂದ ಉಜಿರೆ ಕಾಶಿಬೆಟ್ಟು ಎಂಬಲ್ಲಿ ಸಯ್ಯಿದ್ ಉಜಿರೆ ತಂಙಳ್ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಲ್‌ಜ‌ಅ ಎಜುಕೇಶನ್, ದ‌ಅವಾ ಏಂಡ್ ರಿಲೀಫ್ ಟ್ರಸ್ಟ್ ಇದರ ವತಿಯಿಂದ ಈ ಬಾರಿ ರಂಝಾನ್ 27 ರ “ಸಂಭವನೀಯ ಲೈಲತುಲ್ ಕದರ್” ಪುಣ್ಯ ರಾತ್ರಿಯಂದು ಬೃಹತ್ ಮಟ್ಟದ ಪ್ರಾರ್ಥನಾ ಸಮ್ಮೇಳನ ನಡೆಸುವರೇ ಗಣ್ಯರ ಸಮಾಲೋಚನಾ ಸಭೆಯು ಮಲ್‌ಜ‌ಅ ಇಂಗ್ಲೀಷ್ ಮೀಡಿಯಂ ಕ್ಯಾಂಪಸ್ ನಲ್ಲಿ ನಡೆಯಿತು.


ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಶಿಲ್ಪಿ ಸಯ್ಯಿದ್ ಅಲವಿ ಜಲಾಲುದ್ದೀನ್ ಉಜಿರೆ ತಂಙಳ್ ಮಾರ್ಗದರ್ಶನ ಹಾಗೂ ಯೋಜನೆಯ ವಿವರ ನೀಡಿದರು.
ವೇದಿಕೆಯಲ್ಲಿದ್ದ ಪ್ರಾರ್ಥನಾ ಸಮ್ಮೇಳನದ ಪೂರ್ವಾಧ್ಯಕ್ಷ ಹಾಜಿ ಅಬ್ದುಲ್ ಲೆತೀಫ್ ಗುರುವಾಯನಕೆರೆ, ಹಮೀದ್ ಸ‌ಅದಿ ಕಳೆಂಜಿಬೈಲು, ಬಟ್ಲಡ್ಕ ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ, ಹಾಜಿ ಹಸೈನಾರ್ ಶಾಫಿ ಗುರುವಾಯನಕೆರೆ, ಮಲ್‌ಜ‌ಅ ಪ್ರಧಾನ ಧರ್ಮಗುರು ಸಯ್ಯಿದ್ ಫಹೀಮ್ ತಂಙಳ್ ಮಂಜೇಶ್ವರ, ಖಾಲಿದ್ ಮುಸ್ಲಿಯಾರ್ ಕುಂಟಿನಿ, ಎ ಅಹ್ಮದ್ ಬಶೀರ್ ಪಂಜಿಮೊಗರು, ಮೊದಲಾದವರು ಸಂದರ್ಭೋಚಿತವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.


ಈ ಹಿಂದೆ ಮೂರು ಬಾರಿ ಪ್ರಾರ್ಥನಾ ಸಮ್ಮೇಳನ ಯಶಸ್ವಿಯಾಗಿ ನಡೆದಿದ್ದು ಈ‌ಬಾರಿ ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮ ನಡೆಸುವುದೆಂದು ತೀರ್ಮಾನಿಸಲಾಯಿತು.‌
ಸಮಾಲೀಚನಾ ಸಭೆಯಲ್ಲಿ ಎಸ್ಸೆಸ್ಸೆಫ್, ಎಸ್‌ವೈಎಸ್, ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಮೆನೇಜ್ ಮೆಂಟ್ ಅಸೋಸಿಯೇಷನ್, ಎಸ್ ಜೆ ಯು, ಸಂಯುಕ್ತ ಜಮಾಅತ್ ಸಹಿತ ಸುನ್ನೀ‌ ಸಂಘ ಕುಟುಂಬದ ಪದಾಧಿಕಾರಿಗಳು, ವಿವಿಧ ಜಮಾಅತ್ ಪ್ರತಿನಿಧಿಗಳು ಭಾಗವಹಿಸಿದ್ದರು.
ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಸ್ಚಾಗತಿಸಿ ಪ್ರಸ್ತಾವನೆ ಮಂಡಿಸಿದರು. ಸಂಸ್ಥೆಯ ಪಿಆರ್‌ಒ ಶರೀಫ್ ಬೆರ್ಕಳ ಕಾರ್ಯಕ್ರಮ ನಿರೂಪಿಸಿದರು.


ಈ ವೇಳೆ ಉಳ್ಳಾಳ ಉರೂಸ್ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಪ್ರಾರ್ಥನಾ ಸಂಗಮದ ಸ್ವಾಗತ ಸಮಿತಿ‌ರಚಿಸಲಾಗಿ ಚೇರ್ಮೆನ್ ಆಗಿ ಹಾಜಿ ಹೈನಾರ್ ಶಾಫಿ ಗುರುವಾಯನಕೆರೆ, ಜನರಲ್ ಕನ್ವೀನರ್ ಆಗಿ ಅಶ್ರಫ್ ಆಲಿಕುಂಞಿ ಮುಂಡಾಜೆ, ಫೈನಾನ್ಸ್ ಸೆಕ್ರೆಟರಿ ಯಾಗಿ ಶಂಶುದ್ದೀನ್ ಜಾರಿಗೆಬೈಲು ಇವರನ್ನು ಆರಿಸಲಾಯಿತು. ‌ಉಳಿದಂತೆ ವಿವಿಧ ವಿಭಾಗಗಳನ್ನೊಳಗೊಂಡ 45 ಮಂದಿಯ ಸಮಿತಿ‌ ರಚಿಸಲಾಯಿತು.

Related posts

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya

ಮುಂಡಾಜೆ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಕೊಯ್ಯೂರು ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ : ಬೆಸ್ಟ್ ಫೌಂಡೇಶನ್ ವತಿಯಿಂದ ನೀರಿನ ಟ್ಯಾಂಕ್ ವಿತರಣೆ

Suddi Udaya

ಬದ್ರಿಯಾ ಜುಮ್ಮಾ ಮಸ್ಜಿದ್ ಉಜಿರೆ ಟೌನ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!