23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

ಬೆಳ್ತಂಗಡಿ: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳಕೂಟ ಮಾ. 30 ನಡೆಯಲಿದ್ದು. ಇದರ ಪದಾಧಿಕಾರಿಗಳ ಸಭೆಯು ಮಾ. 3 ರಂದು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್ ರ ಅಧ್ಯಕ್ಷತೆಯಲ್ಲಿ ಜರಗಿತು.

ಸುದೀರ್ಘ 31ವರ್ಷಗಳಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ದಿ. ಕೆ ವಸಂತ ಬಂಗೇರ ರವರು ಸೇವೆ ಸಲ್ಲಿಸಿದ್ದು. ಮುಂದಕ್ಕೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಆಯ್ಕೆ ಮಾಡಲಾಯಿತು. ಗೌರವ ಮಾರ್ಗದರ್ಶಕರಾಗಿ ಶ್ರೀಮತಿ ಸುಜಿತಾ ವಸಂತ ಬಂಗೇರ ರವರನ್ನು ಮತ್ತು ಅಧ್ಯಕ್ಷರನ್ನಾಗಿ ನಿತೀಶ್ ಹೆಚ್ ಕೋಟ್ಯಾನ್, ಕಾರ್ಯಾಧ್ಯಕ್ಷರಾಗಿ ಶೇಖರ್ ಕುಕ್ಕೇಡಿ, ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಭರತರಾಜ್ ಜೈನ್ ಪಾಪುದಡ್ಕಗುತ್ತು,ಕೋಶಾಧಿಕಾರಿ ಅಶೋಕ್ ಪಾಣೂರು ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya
error: Content is protected !!