September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್


ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನ 2024-2025 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತೆಗೆದುಕೊಂಡ ತಿರ್ಮಾನದಂತೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮಂಡಳಿಯು ನಿರ್ಣಯ ಕೈಗೊಂಡು ಕುಡಿಯುವ ನೀರಿನ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು ಮಾ. 1ರಂದು ಮೊದಲ ಹಂತದಲ್ಲಿ ಲಿಂಗಾಂತ್ಯಾರು ಹಾಗೂ ಪಿಚಲಾರು ಪ್ರದೇಶದಲ್ಲಿ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪಂಪ್ ಆಪರೇಟರ್ ಹಾಗೂ ಸ್ಥಳೀಯರ ಸಮಕ್ಷಮದಲ್ಲಿ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸಲಾಯಿತು.

ಈಗಾಗಲೇ ಗ್ರಾಮ ಪಂಚಾಯತ್ ಕುಡಿಯುವ ನೀರಿನ ಶುಲ್ಕ ಬಾಕಿ ಇರುವವರಿಗೆ ಪಂಚಾಯತ್ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿ ನೋಟಿಸ್ ನೀಡಲಾಗಿದ್ದು ಹಲವರು ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿ ಶುಲ್ಕ ಪಾವತಿಸಿರುತ್ತಾರೆ, ಇನ್ನು ಶುಲ್ಕ ಪಾವತಿಸದ ಗ್ರಾಮದ ಇತರ ಭಾಗಗಳಲ್ಲಿ ನೀರಿನ ಸಂಪರ್ಕ ಮುಂದಿನ ಹಂತದಲ್ಲಿ ಕಡಿತಗೊಳಿಸಲಾಗುವುದು, ಈಗಾಗಲೇ ಮೆಸ್ಕಾಂ ಇಲಾಖೆ ಕುಡಿಯುವ ನೀರಿನ ವಿದ್ಯುತ್ ಸ್ಥಾವರದ ಬಿಲ್ ಪಾವತಿಸಲು ನೋಟಿಸ್ ನೀಡಿದ್ದು ಕುಡಿಯುವ ನೀರಿನ ಬಳಕೆದಾರರು ನಿಗದಿತ ಸಮಯದಲ್ಲಿ ಪಂಚಾಯತ್ ಗೆ ಶುಲ್ಕ ಪಾವತಿಸಿದರೆ ಮೆಸ್ಕಾಂ ಇಲಾಖೆಗೆ ವಿದ್ಯುತ್ ಬಿಲ್ ಪಾವತಿಸಬಹುದು ಎಂದು ಪಂಚಾಯತ್ ಆಡಳಿತ ಮಂಡಳಿ ತಿಳಿಸಿದೆ. ಈಗಾಗಲೇ ಕುಡಿಯುವ ನೀರಿನ ಜೆಜೆಎಂ ಯೋಜನೆಯಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕುಡಿಯುವ ನೀರಿನ ಬಳಕೆದಾರರಿಗೆ ಉಪಯುಕ್ತವಾಗಲಿದೆ. ಕುಡಿಯುವ ನೀರಿಗಾಗಿ ತೆಗೆದುಕೊಂಡ ಕನೆಕ್ಷನ್ ಬೇರೆ ಉದ್ದೇಶಕ್ಕೆ ಬಳಸಿದರೆ ಕನೆಕ್ಷನ್ ಕಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!