30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

ಉಜಿರೆ: “ಬೆಂಕಿ ಅವಘಡಗಳು ಹಾಗೂ ಆರೋಗ್ಯದ ಕುರಿತ ಜಾಗೃತಿ, ಮುಂಜಾಗೃತ ಕ್ರಮಗಳನ್ನು ತಿಳಿದಿರುವುದು ಅತ್ಯವಶ್ಯಕ. ಪ್ರತಿಯೊಬ್ಬರೂ ಅವರವರ ಮನೆ, ಸುತ್ತಮುತ್ತಲಿನ ವಸ್ತು, ಜನ, ಪ್ರಾಣಿ-ಪಕ್ಷಿಗಳನ್ನು ಇಂತಹ ತುರ್ತು ಸಮಯದಲ್ಲಿ ಕಾಪಾಡಿಕೊಳ್ಳುವುದು ಕರ್ತವ್ಯವಾಗಿದೆ” ಎಂದು ಮಂಗಳೂರಿನ ಫೈರ್ ಸೇಫ್ಟಿ ಹಾಗೂ ಹೆಲ್ತ್ ಸೇಫ್ಟಿ ಯ ತರಬೇತುದಾರರಾದ ಸತ್ಯರಾಜ್, ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾಹಿತಿ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಸಿ.ಬಿ.ಎಸ್.ಇ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ವೇದಿಕೆಯಲ್ಲಿ ಎಸ್.ಡಿ.ಎಮ್ ಸೆಕೆಂಡರಿ ಅನುದಾನಿತ ಶಾಲೆಯ ಮುಖ್ಯೋಪಾಧ್ಯಾಯರಾದ ಸುರೇಶ್, ಶಿಕ್ಷಕ ಮೋನಪ್ಪ ಹಾಗೂ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕಿ ಶಾಂಟಿ ಜಾರ್ಜ್ ಇವರು ಉಪಸ್ಥಿತರಿದ್ದರು.

ಶಿಕ್ಷಕ ಗಣೇಶ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಿಕ್ಷಕ ಕಿರಣ್‌ರಾಜ್ ನಿರೂಪಿಸಿದರು.

Related posts

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya
error: Content is protected !!