24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

ಬೆಳ್ತಂಗಡಿ: ಎಲೆಚುಕ್ಕಿ ರೋಗದಲ್ಲಿ ಸುಳ್ಯ-ಪುತ್ತೂರು ಭಾಗದ ರೈತರು ಬೆಲೆ ನಾಶದಿಂದ ಹೈರಾಣಗಿದ್ದಾರೆ. ರೋಗಕ್ಕೆ ಸಮರ್ಪಕವಾಗಿ ಮದ್ದುಗಳು ತೋಟಗಾರಿಕೆ ಇಲಾಖೆಯಲ್ಲಿ ಸಿಗುತ್ತಿಲ್ಲ. ಪೋಷಕಾಂಶಗಳನ್ನು ನೀಡುತ್ತಿಲ್ಲ. ಔಷಧಿಗಳ ಕೊರತೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದರು.

ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದ ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಎಲೆ ಚುಕ್ಕಿ ರೋಗದ ಕುರಿತು ಧ್ವನಿ ಎತ್ತಿ, ಕೇಂದ್ರದಿಂದ ಅನುದಾನ ಬಂದರು ರೈತರ ಕೈಗೆ ಸೇರಿಲ್ಲ. ರಾಜ್ಯದಿಂದಲೂ ಅನುದಾನ ಶೀಘ್ರವಾಗಿ ಒದಗಿಸಬೇಕು ಈ ಸಮಸ್ಯೆಯನ್ನು ಬಗೆಹರಿಸಬೇಕು ಆಗ್ರಹಿಸಿದರು. ಶೀಲಿಂದ್ರ ಸಮರ್ಪಕವಾಗಿ ದೊರಕುತ್ತಿಲ್ಲ. ಗುಣ ಮಟ್ಟದ ಸುಣ್ಣ ಸಿಗುತ್ತಿಲ್ಲ. ಸರಕಾರ ರೋಗಗಕ್ಕೆ ಔಷಧಿ ಕಂಡುಕೊಳ್ಳಲು ಸುಮಾರು 50 ಲಕ್ಷ ಖರ್ಚು ಮಾಡಲಾಗಿದೆ. ಆದರೆ ವರದಿ ಇನ್ನೂ ಬಂದಿಲ್ಲ. ಪರ್ಯಾಯ ಬೆಳೆಗೆ ಕಾಫಿ ಸೂಚಿಸಿದ್ದು ಇನ್ನೂ ಶಕ್ತಿ ತುಂಬು ಕಾರ್ಯವಾಗಿಲ್ಲ. ಕೇಂದ್ರದಿಂದ ಅನುದಾನ ಬಂದರು ರಾಜ್ಯ ಸರಕಾರ ಅನುದಾನ ಮಂಜೂರು ಮಾಡಲು ತಡವರಿಸುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದರು. ಅವರೊಂದಿಗೆ ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಧ್ವನಿಗೂಡಿಸಿದರು.

ಕೇಂದ್ರದಿಂದ ಅನುದಾನ ಬಂದಿದ್ದು ರಾಜ್ಯದ ಅನುದಾನ ಜೋಡಿಕರಣ ಪ್ರಕ್ರಿಯೆ ಮಾಡಲಾಗುತ್ತಿದ್ದು ಶೀಘ್ರವೇ ನೀಡಲು ತಯಾರಿ ಮಾಡುತ್ತಿದ್ದೇವೆ. ಒಂದು ಹೇಕ್ಟೆರ್‌ಗೆ 1,200 ರೂ. ನೀಡುತ್ತಿದ್ದು ಅದು ಕಡಿಮೆ ಆಗುತ್ತದೆ ಎಂದು ಕೇಂದ್ರಕ್ಕೆ ಹೆಚ್ಚುವರಿ ಮಾಡುವಂತೆ ಮನವಿ ಕಳುಹಿಸಲಾಗಿದೆ ಎಂದು ತೋಟಗಾರಿಕಾ ಇಲಾಖಾ ಸಚಿವರು ಉತ್ತರಿಸಿದರು.

Related posts

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!