25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೆ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದರು.

ಅವರು ಬೆಂಗಳೂರಿನಲ್ಲಿ ಮಾ.4 ರಂದು ನಡೆದ ವಿಧಾನ ಸಭಾ ಅಧಿವೇಶನದಲ್ಲಿ ಮಾತನಾಡಿದರು. ಈ ವೇಳೆ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಕೇಳಿದಾಗ ಪ್ರವಾಸೋದ್ಯಮ ಸಚಿವರು ಈ ಬಗ್ಗೆ ನಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು , ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಬಹುತೇಕ ಯುವಕರು ಗೆದ್ದು ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಸೇರಿದಂತೆ ದೊಡ್ಡ ಅವಕಾಶ ಕರಾವಳಿ ಭಾಗದಲ್ಲಿದೆ. ಹೀಗಾಗಿ ನಮ್ಮ ಸಚಿವ ಹೆಚ್.ಕೆ ಪಾಟೀಲ್ ಅವರು ದೊಡ್ಡ ಕನಸು ಕಂಡಿದ್ದು ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Related posts

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya
error: Content is protected !!