22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೆ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದರು.

ಅವರು ಬೆಂಗಳೂರಿನಲ್ಲಿ ಮಾ.4 ರಂದು ನಡೆದ ವಿಧಾನ ಸಭಾ ಅಧಿವೇಶನದಲ್ಲಿ ಮಾತನಾಡಿದರು. ಈ ವೇಳೆ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಕೇಳಿದಾಗ ಪ್ರವಾಸೋದ್ಯಮ ಸಚಿವರು ಈ ಬಗ್ಗೆ ನಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು , ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಬಹುತೇಕ ಯುವಕರು ಗೆದ್ದು ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಸೇರಿದಂತೆ ದೊಡ್ಡ ಅವಕಾಶ ಕರಾವಳಿ ಭಾಗದಲ್ಲಿದೆ. ಹೀಗಾಗಿ ನಮ್ಮ ಸಚಿವ ಹೆಚ್.ಕೆ ಪಾಟೀಲ್ ಅವರು ದೊಡ್ಡ ಕನಸು ಕಂಡಿದ್ದು ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Related posts

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya
error: Content is protected !!