23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿಯ ವಾರ್ಷಿಕ ಮಹಾಸಭೆಯು ಗೌಸಿಯಾ ಜಾಮಿಯಾ ಮಸೀದಿ ಸಭಾಂಗಣದಲ್ಲಿ ನಡೆಯಿತು.


ಮಹಾಸಭೆಯು ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ಅಧ್ಯಕ್ಷರಾದ ಅಬೂಬಕ್ಕರ್ ಸಮಡೈನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಾಸಭೆಯನ್ನು ಝೋನ್ ಸಮಿತಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫಿ ಉದ್ಘಾಟಿಸಿದರು. ವೀಕ್ಷಕರಾಗಿ ಝೋನ್ ಅಧ್ಯಕ್ಷರಾದ ಎಸ್ ಎಂ ಕೋಯ ತಂಙಳ್ ಉಜಿರೆ ಆಗಮಿಸಿದ್ದರು. ಸರ್ಕಲ್ ಉಸ್ತುವಾರಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಗುರುವಾಯನಕೆರೆ ವಿಷಯ ಮಂಡಿಸಿದರು. ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನೂತನ ಸಮಿತಿ ರಚನೆಯ ಆಯ್ಕೆ ಪ್ರಕ್ರಿಯೆಗಳಿಗೆ ನೇತೃತ್ವ ನೀಡಿದರು.

ಸರ್ಕಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಇಂದಬೆಟ್ಟು ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರಗಳನ್ನು ಮಂಡಿಸಿದರು.
ಮುಂದಿನ ಸಂಘಟನಾ ಅವಧಿಯ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಅಬೂಬಕ್ಕರ್ ಸಮಡೈನ್ ಪುನರಾಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಸಾಮಾಜಿಕ ಕಾರ್ಯಕರ್ತ ಮೆಹಬೂಬ್ ಸಂಜಯನಗರ ಹಾಗೂ ಕೋಶಾಧಿಕಾರಿಯಾಗಿ ಸಂಘಟಕ ಪಿ ಯು ಅಬ್ದುಲ್ ರಹ್ಮಾನ್ ಮುಸ್ಲಿಯಾರ್ ನಾವೂರು, ಉಪಾಧ್ಯಕ್ಷರಾಗಿ ಆದಂ ಸಾಹೇಬ್ ಮಂಜೊಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಎನ್ ಎಸ್ ಅಬ್ದುಲ್ ರಹ್ಮಾನ್ ಸಂಜಯನಗರ, ದಅವಾ ಕಾರ್ಯದರ್ಶಿಯಾಗಿ ಪಿ ಯು ಆಲಿಕುಂಞ ಸಖಾಫಿ ನಾವೂರು ,ಇಸಾಬಾ ಕಾರ್ಯದರ್ಶಿಯಾಗಿ ಬಿ ಎಂ ರಮ್ಲಾನ್ ಮೈಕೆ, ಸಾಂತ್ವನ ಕಾರ್ಯದರ್ಶಿಯಾಗಿ ಹಮೀದ್ ಇಂದಬೆಟ್ಟು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಎಂ ಎಚ್ ಅಬ್ದುಲ್ಲಾ ಮಲೆಬೆಟ್ಟು, ಮೀಡಿಯಾ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಕೇಳ್ತಾಜೆ ಇವರನ್ನು ಆಯ್ಕೆ ಮಾಡಲಾಯಿತು. ಒಂಭತ್ತು ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಯ್ಕೆ ಮಾಡಲಾಯಿತು.


ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಇಂದಬೆಟ್ಟು ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಮೆಹಬೂಬ್ ಸಂಜಯನಗರ ಧನ್ಯವಾದಕವಿತ್ತರು.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya
error: Content is protected !!