July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

ಬೆಳ್ತಂಗಡಿ: ಕಳೆದ 16 ವರ್ಷಗಳಿಂದ ಉಜಿರೆ ಕಾಶಿಬೆಟ್ಟು ಎಂಬಲ್ಲಿ ಸಯ್ಯಿದ್ ಉಜಿರೆ ತಂಙಳ್ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಲ್‌ಜ‌ಅ ಎಜುಕೇಶನ್, ದ‌ಅವಾ ಏಂಡ್ ರಿಲೀಫ್ ಟ್ರಸ್ಟ್ ಇದರ ವತಿಯಿಂದ ಈ ಬಾರಿ ರಂಝಾನ್ 27 ರ “ಸಂಭವನೀಯ ಲೈಲತುಲ್ ಕದರ್” ಪುಣ್ಯ ರಾತ್ರಿಯಂದು ಬೃಹತ್ ಮಟ್ಟದ ಪ್ರಾರ್ಥನಾ ಸಮ್ಮೇಳನ ನಡೆಸುವರೇ ಗಣ್ಯರ ಸಮಾಲೋಚನಾ ಸಭೆಯು ಮಲ್‌ಜ‌ಅ ಇಂಗ್ಲೀಷ್ ಮೀಡಿಯಂ ಕ್ಯಾಂಪಸ್ ನಲ್ಲಿ ನಡೆಯಿತು.


ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಶಿಲ್ಪಿ ಸಯ್ಯಿದ್ ಅಲವಿ ಜಲಾಲುದ್ದೀನ್ ಉಜಿರೆ ತಂಙಳ್ ಮಾರ್ಗದರ್ಶನ ಹಾಗೂ ಯೋಜನೆಯ ವಿವರ ನೀಡಿದರು.
ವೇದಿಕೆಯಲ್ಲಿದ್ದ ಪ್ರಾರ್ಥನಾ ಸಮ್ಮೇಳನದ ಪೂರ್ವಾಧ್ಯಕ್ಷ ಹಾಜಿ ಅಬ್ದುಲ್ ಲೆತೀಫ್ ಗುರುವಾಯನಕೆರೆ, ಹಮೀದ್ ಸ‌ಅದಿ ಕಳೆಂಜಿಬೈಲು, ಬಟ್ಲಡ್ಕ ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ, ಹಾಜಿ ಹಸೈನಾರ್ ಶಾಫಿ ಗುರುವಾಯನಕೆರೆ, ಮಲ್‌ಜ‌ಅ ಪ್ರಧಾನ ಧರ್ಮಗುರು ಸಯ್ಯಿದ್ ಫಹೀಮ್ ತಂಙಳ್ ಮಂಜೇಶ್ವರ, ಖಾಲಿದ್ ಮುಸ್ಲಿಯಾರ್ ಕುಂಟಿನಿ, ಎ ಅಹ್ಮದ್ ಬಶೀರ್ ಪಂಜಿಮೊಗರು, ಮೊದಲಾದವರು ಸಂದರ್ಭೋಚಿತವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.


ಈ ಹಿಂದೆ ಮೂರು ಬಾರಿ ಪ್ರಾರ್ಥನಾ ಸಮ್ಮೇಳನ ಯಶಸ್ವಿಯಾಗಿ ನಡೆದಿದ್ದು ಈ‌ಬಾರಿ ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮ ನಡೆಸುವುದೆಂದು ತೀರ್ಮಾನಿಸಲಾಯಿತು.‌
ಸಮಾಲೀಚನಾ ಸಭೆಯಲ್ಲಿ ಎಸ್ಸೆಸ್ಸೆಫ್, ಎಸ್‌ವೈಎಸ್, ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಮೆನೇಜ್ ಮೆಂಟ್ ಅಸೋಸಿಯೇಷನ್, ಎಸ್ ಜೆ ಯು, ಸಂಯುಕ್ತ ಜಮಾಅತ್ ಸಹಿತ ಸುನ್ನೀ‌ ಸಂಘ ಕುಟುಂಬದ ಪದಾಧಿಕಾರಿಗಳು, ವಿವಿಧ ಜಮಾಅತ್ ಪ್ರತಿನಿಧಿಗಳು ಭಾಗವಹಿಸಿದ್ದರು.
ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಸ್ಚಾಗತಿಸಿ ಪ್ರಸ್ತಾವನೆ ಮಂಡಿಸಿದರು. ಸಂಸ್ಥೆಯ ಪಿಆರ್‌ಒ ಶರೀಫ್ ಬೆರ್ಕಳ ಕಾರ್ಯಕ್ರಮ ನಿರೂಪಿಸಿದರು.


ಈ ವೇಳೆ ಉಳ್ಳಾಳ ಉರೂಸ್ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಪ್ರಾರ್ಥನಾ ಸಂಗಮದ ಸ್ವಾಗತ ಸಮಿತಿ‌ರಚಿಸಲಾಗಿ ಚೇರ್ಮೆನ್ ಆಗಿ ಹಾಜಿ ಹೈನಾರ್ ಶಾಫಿ ಗುರುವಾಯನಕೆರೆ, ಜನರಲ್ ಕನ್ವೀನರ್ ಆಗಿ ಅಶ್ರಫ್ ಆಲಿಕುಂಞಿ ಮುಂಡಾಜೆ, ಫೈನಾನ್ಸ್ ಸೆಕ್ರೆಟರಿ ಯಾಗಿ ಶಂಶುದ್ದೀನ್ ಜಾರಿಗೆಬೈಲು ಇವರನ್ನು ಆರಿಸಲಾಯಿತು. ‌ಉಳಿದಂತೆ ವಿವಿಧ ವಿಭಾಗಗಳನ್ನೊಳಗೊಂಡ 45 ಮಂದಿಯ ಸಮಿತಿ‌ ರಚಿಸಲಾಯಿತು.

Related posts

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂಟ್ವಾಳ: ಯುವತಿಯ ಹತ್ಯೆ ಪ್ರಕರಣ ಶಾಸಕ ಹರೀಶ್ ಪೂಂಜ ಖಂಡನೆ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya
error: Content is protected !!