25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

ಬೆಳ್ತಂಗಡಿ: ಕಳೆದ 16 ವರ್ಷಗಳಿಂದ ಉಜಿರೆ ಕಾಶಿಬೆಟ್ಟು ಎಂಬಲ್ಲಿ ಸಯ್ಯಿದ್ ಉಜಿರೆ ತಂಙಳ್ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಲ್‌ಜ‌ಅ ಎಜುಕೇಶನ್, ದ‌ಅವಾ ಏಂಡ್ ರಿಲೀಫ್ ಟ್ರಸ್ಟ್ ಇದರ ವತಿಯಿಂದ ಈ ಬಾರಿ ರಂಝಾನ್ 27 ರ “ಸಂಭವನೀಯ ಲೈಲತುಲ್ ಕದರ್” ಪುಣ್ಯ ರಾತ್ರಿಯಂದು ಬೃಹತ್ ಮಟ್ಟದ ಪ್ರಾರ್ಥನಾ ಸಮ್ಮೇಳನ ನಡೆಸುವರೇ ಗಣ್ಯರ ಸಮಾಲೋಚನಾ ಸಭೆಯು ಮಲ್‌ಜ‌ಅ ಇಂಗ್ಲೀಷ್ ಮೀಡಿಯಂ ಕ್ಯಾಂಪಸ್ ನಲ್ಲಿ ನಡೆಯಿತು.


ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಶಿಲ್ಪಿ ಸಯ್ಯಿದ್ ಅಲವಿ ಜಲಾಲುದ್ದೀನ್ ಉಜಿರೆ ತಂಙಳ್ ಮಾರ್ಗದರ್ಶನ ಹಾಗೂ ಯೋಜನೆಯ ವಿವರ ನೀಡಿದರು.
ವೇದಿಕೆಯಲ್ಲಿದ್ದ ಪ್ರಾರ್ಥನಾ ಸಮ್ಮೇಳನದ ಪೂರ್ವಾಧ್ಯಕ್ಷ ಹಾಜಿ ಅಬ್ದುಲ್ ಲೆತೀಫ್ ಗುರುವಾಯನಕೆರೆ, ಹಮೀದ್ ಸ‌ಅದಿ ಕಳೆಂಜಿಬೈಲು, ಬಟ್ಲಡ್ಕ ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ, ಹಾಜಿ ಹಸೈನಾರ್ ಶಾಫಿ ಗುರುವಾಯನಕೆರೆ, ಮಲ್‌ಜ‌ಅ ಪ್ರಧಾನ ಧರ್ಮಗುರು ಸಯ್ಯಿದ್ ಫಹೀಮ್ ತಂಙಳ್ ಮಂಜೇಶ್ವರ, ಖಾಲಿದ್ ಮುಸ್ಲಿಯಾರ್ ಕುಂಟಿನಿ, ಎ ಅಹ್ಮದ್ ಬಶೀರ್ ಪಂಜಿಮೊಗರು, ಮೊದಲಾದವರು ಸಂದರ್ಭೋಚಿತವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.


ಈ ಹಿಂದೆ ಮೂರು ಬಾರಿ ಪ್ರಾರ್ಥನಾ ಸಮ್ಮೇಳನ ಯಶಸ್ವಿಯಾಗಿ ನಡೆದಿದ್ದು ಈ‌ಬಾರಿ ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮ ನಡೆಸುವುದೆಂದು ತೀರ್ಮಾನಿಸಲಾಯಿತು.‌
ಸಮಾಲೀಚನಾ ಸಭೆಯಲ್ಲಿ ಎಸ್ಸೆಸ್ಸೆಫ್, ಎಸ್‌ವೈಎಸ್, ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಮೆನೇಜ್ ಮೆಂಟ್ ಅಸೋಸಿಯೇಷನ್, ಎಸ್ ಜೆ ಯು, ಸಂಯುಕ್ತ ಜಮಾಅತ್ ಸಹಿತ ಸುನ್ನೀ‌ ಸಂಘ ಕುಟುಂಬದ ಪದಾಧಿಕಾರಿಗಳು, ವಿವಿಧ ಜಮಾಅತ್ ಪ್ರತಿನಿಧಿಗಳು ಭಾಗವಹಿಸಿದ್ದರು.
ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಸ್ಚಾಗತಿಸಿ ಪ್ರಸ್ತಾವನೆ ಮಂಡಿಸಿದರು. ಸಂಸ್ಥೆಯ ಪಿಆರ್‌ಒ ಶರೀಫ್ ಬೆರ್ಕಳ ಕಾರ್ಯಕ್ರಮ ನಿರೂಪಿಸಿದರು.


ಈ ವೇಳೆ ಉಳ್ಳಾಳ ಉರೂಸ್ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಪ್ರಾರ್ಥನಾ ಸಂಗಮದ ಸ್ವಾಗತ ಸಮಿತಿ‌ರಚಿಸಲಾಗಿ ಚೇರ್ಮೆನ್ ಆಗಿ ಹಾಜಿ ಹೈನಾರ್ ಶಾಫಿ ಗುರುವಾಯನಕೆರೆ, ಜನರಲ್ ಕನ್ವೀನರ್ ಆಗಿ ಅಶ್ರಫ್ ಆಲಿಕುಂಞಿ ಮುಂಡಾಜೆ, ಫೈನಾನ್ಸ್ ಸೆಕ್ರೆಟರಿ ಯಾಗಿ ಶಂಶುದ್ದೀನ್ ಜಾರಿಗೆಬೈಲು ಇವರನ್ನು ಆರಿಸಲಾಯಿತು. ‌ಉಳಿದಂತೆ ವಿವಿಧ ವಿಭಾಗಗಳನ್ನೊಳಗೊಂಡ 45 ಮಂದಿಯ ಸಮಿತಿ‌ ರಚಿಸಲಾಯಿತು.

Related posts

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya
error: Content is protected !!