April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

ಬೆಳ್ತಂಗಡಿ: ದಾನಿಗಳ ಸಹಕಾರದೊಂದಿಗೆ ಮಾ.4 ರಂದು ಮದ್ದಡ್ಕದ ಸಮಾಜ‌ಸೇವಕ ಅಬ್ಬೋನು ಮದ್ದಡ್ಕ ಅವರ ನಿವಾಸದಲ್ಲಿ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರದ ಕಿಟ್ ವಿತರಣೆ, ಝಕಾತ್ ದಾನ ನಿಧಿ, ಹಾಗೂ‌ ಅರ್ಹ ಫಲಾನುಭವಿಗಳಿಗೆ ಚಿಕಿತ್ಸೆಗೆ ಧನಸಹಾಯ ಮತ್ತು ಶೈಕ್ಷಣಿಕ ನಿಧಿ ಹಸ್ತಾಂತರ ಕಾರ್ಯಕ್ರಮ ಜರುಗಿತು.

ಇಂಡಿಯನ್ ಆಸ್ಪತ್ರೆ ಮಂಗಳೂರು ಇದರ ಚೇರ್ಮೆನ್, ಖ್ಯಾತ ಹೃದಯರೋಗ ತಜ್ಞ ಡಾ. ಯೂಸುಫ್ ಕುಂಬ್ಲೆ ಅವರ ತಾಯಿಯ ಹೆಸರಿನಲ್ಲಿರುವ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ ತಲಾ 2 ಸಾವಿರದಂತೆ 50 ಕುಟುಂಬಗಳಿಗೆ 1 ಲಕ್ಷ ರೂ ವೆಚ್ಚದಲ್ಲಿ ರಂಝಾನ್ ಆಹಾರ ಸಾಮಾಗ್ರಿಗಳ ಕಿಟ್ ಹಸ್ತಾಂತರಿಸಲಾಯಿತು.


ಇದೇ ವೇಳೆ ಜಮೀಯತುಲ್ ಫಲಾಹ್ ಉಡುಪಿ ದ.ಕ ಘಟಕದ ಪೂರ್ವ ಜಿಲ್ಲಾಧ್ಯಕ್ಷ, ಹಿರಿಯ ಸಾಮಾಜಿಕ ಮುತ್ಸದ್ದಿ ಹಾಜಿ ಅಬ್ದುಲ್‌ ಲೆತೀಫ್ ಸಾಹೇಬ್ ಅವರ ವತಿಯಿಂದ 30 ಕುಟುಂಬಗಳಿಗೆ ತಲಾ 1500 ರಂತೆ ಝಕಾತ್ ದಾನ ನಿಧಿ ವಿತರಿಸಲಾಯಿತು. ಉಳಿದ ಒಂದು ಲಕ್ಷ ರೂ. ಗಳನ್ನು ಜಮೀಯತುಲ್ ಫಲಾಹ್ ಮೂಲಕ ನೀಡುವುದೆಂದು ಅವರು ಈ ವೇಳೆ ಘೋಷಿಸಿದರು.
ಹೊಟೇಲ್ ನಲ್ಲಿ ಕೂಲಿ ಕಾರ್ಮಿಕನಾಗಿದ್ದರೂ ತನ್ನ ಮೂವರು ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ನೀಡುತ್ತಿರುವ ಕುಟುಂಬಕ್ಕೆ ಅಬ್ಬೋನು ಮದ್ದಡ್ಕ ಅವರ ಫ್ಯಾಮಿಲಿಯ ವತಿಯಿಂದ ಶೈಕ್ಷಣಿಕ ನಿಧಿ ಹಸ್ತಾಂತರ ಹಾಗೂ ಮೂರು ಮಂದಿ ತೀರಾ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಫಲಾನುಭವಿಗಳಿಗೆ ಚಿಕಿತ್ಸಾ ವೆಚ್ಚವನ್ನು ನೀಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಹಾಜಿ ಅಬ್ದುಲ್ ಲೆತೀಫ್ ಸಾಹೇಬ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಟ್ಲ ಒಕ್ಕೆತ್ತೂರು ಮಸ್ಜಿದ್ ಧರ್ಮಗುರು ರಫೀಕ್ ಅಹ್ಸನಿ, ಮಲ್‌ಜ‌ಅ ಪ್ರಾರ್ಥನಾ ಸಮ್ಮೇಳನ ಸ್ವಾಗತ ಸಮಿತಿ ಚೇರ್ಮೆನ್ ಹಾಜಿ ಹಸೈನಾರ್ ಶಾಫಿ ಗುರುವಾಯನಕೆರೆ, ಮದ್ದಡ್ಕ ನೂರುಲ್ ಹುದಾ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಶ್ರಫ್ ಚಿಲಿಂಬಿ ಇವರು ಶುಭ ಕೋರಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ಕೋಶಾಧಿಕಾರಿ ಎಂ.ಹೆಚ್ ಅಬೂಬಕ್ಕರ್, ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಅಧ್ಯಕ್ಷ ಎಂ‌.ಹೆಚ್ ಹಸನಬ್ಬ, ಹಿರಿಯರಾದ ಪುತ್ತಾಕ ಮೊದಲಾದವರು ಉಪಸ್ಥಿತರಿದ್ದರು.


ಕಾರ್ಯಕ್ರಮ ಸಂಯೋಜಿಸಿದ ಸಮಾಜ ಸೇವಕ‌ ಅಬ್ಬೋನು ಮದ್ದಡ್ಕ ಅವರ ಕಾರ್ಯವನ್ನು ಅತಿಥಿಗಳು ಅಭಿನಂದಿಸಿದರು.
ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Related posts

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya
error: Content is protected !!