September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ: ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಬಿ-ಖಾತೆಯಿಂದ ಆಗುತ್ತಿರುವ ತೊಂದರೆ ಕುರಿತು ವಿಷಯ ಪ್ರಸ್ತಾಪಿಸಿದರು.

ಮೂಡದಲ್ಲಿ ಸಿಬ್ಬಂದಿಗಳು ಇಲ್ಲ. ವಿನ್ಯಾಸ ನಕ್ಷೆ ನೀಡಿದರೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಲು ಆಗುತ್ತದೆ. ಬೆಂಗಳೂರನ್ನು ಇಟ್ಟಕೊಂಡು ರಾಜ್ಯವನ್ನು ತುಲಣೆ ಮಾಡುವುದು ಬೇಡ. ಗ್ರಾಮದಲ್ಲಿ ಕಂದಾಯ ಇಲಾಖೆ ಕರ್ನ್ವ್ಷನ್ ಮಾಡಿರುವ ಜಾಗ. ಮನೆ ಕಟ್ಟಿರುವ ಜಾಗಗಳಿಗೆ ಫಾರ್ಮ-3ಎ ನೀಡಿ. ಈಗ ಡೋರ್ ನಂಬ್ರ ಸಿಕ್ಕಿದೆ ಸರಕಾರಕ್ಕೆ ತೆರಿಗೆ ಸಿಕ್ಕಿದೆ ಇದರಿಂದ ಏನು ಪ್ರಯೋಜನ. ಬೆಂಗಳೂರಿನಲ್ಲಿ ನಡೆಯುವ ಅವಾಂತರಗಳಿಗೆ ಗ್ರಾಮೀಣ ಪ್ರದೇಶದ ಸಣ್ಣ ಸೈಟ್‌ಗಳಿಗೆ ಅನ್ವಯ ಮಾಡಬೇಡಿ. ಅಂತವರಿಗೆ ವಿಶೇಷ ರಿಯಾಯಿತಿ ನೀಡಿ. ಫಾರ್ಮ್ ನಂಬ್ರ-3 ನೀಡಿ ಎಂದು ಒತ್ತಾಯಿಸಿದ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಈ ಬಗ್ಗೆ ಗಮನಹರಿಸಲಾಗುವುದು. ಎಲ್ಲ ಜನರ ಸಮಸ್ಯೆ ಬಗೆಹರಿಯಬೇಕು. ಸಲಹೆಯನ್ನು ಸ್ವೀಕರಿಸಲಾಗುವುದು ಎಂದು ಪೌರಡಳಿತ ಸಚಿವರು ಉತ್ತರಿಸಿದರು.

Related posts

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ ಹಾಗೂ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ

Suddi Udaya

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!