July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ: ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಬಿ-ಖಾತೆಯಿಂದ ಆಗುತ್ತಿರುವ ತೊಂದರೆ ಕುರಿತು ವಿಷಯ ಪ್ರಸ್ತಾಪಿಸಿದರು.

ಮೂಡದಲ್ಲಿ ಸಿಬ್ಬಂದಿಗಳು ಇಲ್ಲ. ವಿನ್ಯಾಸ ನಕ್ಷೆ ನೀಡಿದರೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಲು ಆಗುತ್ತದೆ. ಬೆಂಗಳೂರನ್ನು ಇಟ್ಟಕೊಂಡು ರಾಜ್ಯವನ್ನು ತುಲಣೆ ಮಾಡುವುದು ಬೇಡ. ಗ್ರಾಮದಲ್ಲಿ ಕಂದಾಯ ಇಲಾಖೆ ಕರ್ನ್ವ್ಷನ್ ಮಾಡಿರುವ ಜಾಗ. ಮನೆ ಕಟ್ಟಿರುವ ಜಾಗಗಳಿಗೆ ಫಾರ್ಮ-3ಎ ನೀಡಿ. ಈಗ ಡೋರ್ ನಂಬ್ರ ಸಿಕ್ಕಿದೆ ಸರಕಾರಕ್ಕೆ ತೆರಿಗೆ ಸಿಕ್ಕಿದೆ ಇದರಿಂದ ಏನು ಪ್ರಯೋಜನ. ಬೆಂಗಳೂರಿನಲ್ಲಿ ನಡೆಯುವ ಅವಾಂತರಗಳಿಗೆ ಗ್ರಾಮೀಣ ಪ್ರದೇಶದ ಸಣ್ಣ ಸೈಟ್‌ಗಳಿಗೆ ಅನ್ವಯ ಮಾಡಬೇಡಿ. ಅಂತವರಿಗೆ ವಿಶೇಷ ರಿಯಾಯಿತಿ ನೀಡಿ. ಫಾರ್ಮ್ ನಂಬ್ರ-3 ನೀಡಿ ಎಂದು ಒತ್ತಾಯಿಸಿದ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಈ ಬಗ್ಗೆ ಗಮನಹರಿಸಲಾಗುವುದು. ಎಲ್ಲ ಜನರ ಸಮಸ್ಯೆ ಬಗೆಹರಿಯಬೇಕು. ಸಲಹೆಯನ್ನು ಸ್ವೀಕರಿಸಲಾಗುವುದು ಎಂದು ಪೌರಡಳಿತ ಸಚಿವರು ಉತ್ತರಿಸಿದರು.

Related posts

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya
error: Content is protected !!