25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ: ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಬಿ-ಖಾತೆಯಿಂದ ಆಗುತ್ತಿರುವ ತೊಂದರೆ ಕುರಿತು ವಿಷಯ ಪ್ರಸ್ತಾಪಿಸಿದರು.

ಮೂಡದಲ್ಲಿ ಸಿಬ್ಬಂದಿಗಳು ಇಲ್ಲ. ವಿನ್ಯಾಸ ನಕ್ಷೆ ನೀಡಿದರೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಲು ಆಗುತ್ತದೆ. ಬೆಂಗಳೂರನ್ನು ಇಟ್ಟಕೊಂಡು ರಾಜ್ಯವನ್ನು ತುಲಣೆ ಮಾಡುವುದು ಬೇಡ. ಗ್ರಾಮದಲ್ಲಿ ಕಂದಾಯ ಇಲಾಖೆ ಕರ್ನ್ವ್ಷನ್ ಮಾಡಿರುವ ಜಾಗ. ಮನೆ ಕಟ್ಟಿರುವ ಜಾಗಗಳಿಗೆ ಫಾರ್ಮ-3ಎ ನೀಡಿ. ಈಗ ಡೋರ್ ನಂಬ್ರ ಸಿಕ್ಕಿದೆ ಸರಕಾರಕ್ಕೆ ತೆರಿಗೆ ಸಿಕ್ಕಿದೆ ಇದರಿಂದ ಏನು ಪ್ರಯೋಜನ. ಬೆಂಗಳೂರಿನಲ್ಲಿ ನಡೆಯುವ ಅವಾಂತರಗಳಿಗೆ ಗ್ರಾಮೀಣ ಪ್ರದೇಶದ ಸಣ್ಣ ಸೈಟ್‌ಗಳಿಗೆ ಅನ್ವಯ ಮಾಡಬೇಡಿ. ಅಂತವರಿಗೆ ವಿಶೇಷ ರಿಯಾಯಿತಿ ನೀಡಿ. ಫಾರ್ಮ್ ನಂಬ್ರ-3 ನೀಡಿ ಎಂದು ಒತ್ತಾಯಿಸಿದ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಈ ಬಗ್ಗೆ ಗಮನಹರಿಸಲಾಗುವುದು. ಎಲ್ಲ ಜನರ ಸಮಸ್ಯೆ ಬಗೆಹರಿಯಬೇಕು. ಸಲಹೆಯನ್ನು ಸ್ವೀಕರಿಸಲಾಗುವುದು ಎಂದು ಪೌರಡಳಿತ ಸಚಿವರು ಉತ್ತರಿಸಿದರು.

Related posts

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya
error: Content is protected !!