23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್


ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನ 2024-2025 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತೆಗೆದುಕೊಂಡ ತಿರ್ಮಾನದಂತೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮಂಡಳಿಯು ನಿರ್ಣಯ ಕೈಗೊಂಡು ಕುಡಿಯುವ ನೀರಿನ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು ಮಾ. 1ರಂದು ಮೊದಲ ಹಂತದಲ್ಲಿ ಲಿಂಗಾಂತ್ಯಾರು ಹಾಗೂ ಪಿಚಲಾರು ಪ್ರದೇಶದಲ್ಲಿ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪಂಪ್ ಆಪರೇಟರ್ ಹಾಗೂ ಸ್ಥಳೀಯರ ಸಮಕ್ಷಮದಲ್ಲಿ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸಲಾಯಿತು.

ಈಗಾಗಲೇ ಗ್ರಾಮ ಪಂಚಾಯತ್ ಕುಡಿಯುವ ನೀರಿನ ಶುಲ್ಕ ಬಾಕಿ ಇರುವವರಿಗೆ ಪಂಚಾಯತ್ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿ ನೋಟಿಸ್ ನೀಡಲಾಗಿದ್ದು ಹಲವರು ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿ ಶುಲ್ಕ ಪಾವತಿಸಿರುತ್ತಾರೆ, ಇನ್ನು ಶುಲ್ಕ ಪಾವತಿಸದ ಗ್ರಾಮದ ಇತರ ಭಾಗಗಳಲ್ಲಿ ನೀರಿನ ಸಂಪರ್ಕ ಮುಂದಿನ ಹಂತದಲ್ಲಿ ಕಡಿತಗೊಳಿಸಲಾಗುವುದು, ಈಗಾಗಲೇ ಮೆಸ್ಕಾಂ ಇಲಾಖೆ ಕುಡಿಯುವ ನೀರಿನ ವಿದ್ಯುತ್ ಸ್ಥಾವರದ ಬಿಲ್ ಪಾವತಿಸಲು ನೋಟಿಸ್ ನೀಡಿದ್ದು ಕುಡಿಯುವ ನೀರಿನ ಬಳಕೆದಾರರು ನಿಗದಿತ ಸಮಯದಲ್ಲಿ ಪಂಚಾಯತ್ ಗೆ ಶುಲ್ಕ ಪಾವತಿಸಿದರೆ ಮೆಸ್ಕಾಂ ಇಲಾಖೆಗೆ ವಿದ್ಯುತ್ ಬಿಲ್ ಪಾವತಿಸಬಹುದು ಎಂದು ಪಂಚಾಯತ್ ಆಡಳಿತ ಮಂಡಳಿ ತಿಳಿಸಿದೆ. ಈಗಾಗಲೇ ಕುಡಿಯುವ ನೀರಿನ ಜೆಜೆಎಂ ಯೋಜನೆಯಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕುಡಿಯುವ ನೀರಿನ ಬಳಕೆದಾರರಿಗೆ ಉಪಯುಕ್ತವಾಗಲಿದೆ. ಕುಡಿಯುವ ನೀರಿಗಾಗಿ ತೆಗೆದುಕೊಂಡ ಕನೆಕ್ಷನ್ ಬೇರೆ ಉದ್ದೇಶಕ್ಕೆ ಬಳಸಿದರೆ ಕನೆಕ್ಷನ್ ಕಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related posts

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya
error: Content is protected !!