25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್


ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನ 2024-2025 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತೆಗೆದುಕೊಂಡ ತಿರ್ಮಾನದಂತೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮಂಡಳಿಯು ನಿರ್ಣಯ ಕೈಗೊಂಡು ಕುಡಿಯುವ ನೀರಿನ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು ಮಾ. 1ರಂದು ಮೊದಲ ಹಂತದಲ್ಲಿ ಲಿಂಗಾಂತ್ಯಾರು ಹಾಗೂ ಪಿಚಲಾರು ಪ್ರದೇಶದಲ್ಲಿ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪಂಪ್ ಆಪರೇಟರ್ ಹಾಗೂ ಸ್ಥಳೀಯರ ಸಮಕ್ಷಮದಲ್ಲಿ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸಲಾಯಿತು.

ಈಗಾಗಲೇ ಗ್ರಾಮ ಪಂಚಾಯತ್ ಕುಡಿಯುವ ನೀರಿನ ಶುಲ್ಕ ಬಾಕಿ ಇರುವವರಿಗೆ ಪಂಚಾಯತ್ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿ ನೋಟಿಸ್ ನೀಡಲಾಗಿದ್ದು ಹಲವರು ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿ ಶುಲ್ಕ ಪಾವತಿಸಿರುತ್ತಾರೆ, ಇನ್ನು ಶುಲ್ಕ ಪಾವತಿಸದ ಗ್ರಾಮದ ಇತರ ಭಾಗಗಳಲ್ಲಿ ನೀರಿನ ಸಂಪರ್ಕ ಮುಂದಿನ ಹಂತದಲ್ಲಿ ಕಡಿತಗೊಳಿಸಲಾಗುವುದು, ಈಗಾಗಲೇ ಮೆಸ್ಕಾಂ ಇಲಾಖೆ ಕುಡಿಯುವ ನೀರಿನ ವಿದ್ಯುತ್ ಸ್ಥಾವರದ ಬಿಲ್ ಪಾವತಿಸಲು ನೋಟಿಸ್ ನೀಡಿದ್ದು ಕುಡಿಯುವ ನೀರಿನ ಬಳಕೆದಾರರು ನಿಗದಿತ ಸಮಯದಲ್ಲಿ ಪಂಚಾಯತ್ ಗೆ ಶುಲ್ಕ ಪಾವತಿಸಿದರೆ ಮೆಸ್ಕಾಂ ಇಲಾಖೆಗೆ ವಿದ್ಯುತ್ ಬಿಲ್ ಪಾವತಿಸಬಹುದು ಎಂದು ಪಂಚಾಯತ್ ಆಡಳಿತ ಮಂಡಳಿ ತಿಳಿಸಿದೆ. ಈಗಾಗಲೇ ಕುಡಿಯುವ ನೀರಿನ ಜೆಜೆಎಂ ಯೋಜನೆಯಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕುಡಿಯುವ ನೀರಿನ ಬಳಕೆದಾರರಿಗೆ ಉಪಯುಕ್ತವಾಗಲಿದೆ. ಕುಡಿಯುವ ನೀರಿಗಾಗಿ ತೆಗೆದುಕೊಂಡ ಕನೆಕ್ಷನ್ ಬೇರೆ ಉದ್ದೇಶಕ್ಕೆ ಬಳಸಿದರೆ ಕನೆಕ್ಷನ್ ಕಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya
error: Content is protected !!