22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್


ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನ 2024-2025 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತೆಗೆದುಕೊಂಡ ತಿರ್ಮಾನದಂತೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮಂಡಳಿಯು ನಿರ್ಣಯ ಕೈಗೊಂಡು ಕುಡಿಯುವ ನೀರಿನ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು ಮಾ. 1ರಂದು ಮೊದಲ ಹಂತದಲ್ಲಿ ಲಿಂಗಾಂತ್ಯಾರು ಹಾಗೂ ಪಿಚಲಾರು ಪ್ರದೇಶದಲ್ಲಿ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪಂಪ್ ಆಪರೇಟರ್ ಹಾಗೂ ಸ್ಥಳೀಯರ ಸಮಕ್ಷಮದಲ್ಲಿ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸಲಾಯಿತು.

ಈಗಾಗಲೇ ಗ್ರಾಮ ಪಂಚಾಯತ್ ಕುಡಿಯುವ ನೀರಿನ ಶುಲ್ಕ ಬಾಕಿ ಇರುವವರಿಗೆ ಪಂಚಾಯತ್ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿ ನೋಟಿಸ್ ನೀಡಲಾಗಿದ್ದು ಹಲವರು ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿ ಶುಲ್ಕ ಪಾವತಿಸಿರುತ್ತಾರೆ, ಇನ್ನು ಶುಲ್ಕ ಪಾವತಿಸದ ಗ್ರಾಮದ ಇತರ ಭಾಗಗಳಲ್ಲಿ ನೀರಿನ ಸಂಪರ್ಕ ಮುಂದಿನ ಹಂತದಲ್ಲಿ ಕಡಿತಗೊಳಿಸಲಾಗುವುದು, ಈಗಾಗಲೇ ಮೆಸ್ಕಾಂ ಇಲಾಖೆ ಕುಡಿಯುವ ನೀರಿನ ವಿದ್ಯುತ್ ಸ್ಥಾವರದ ಬಿಲ್ ಪಾವತಿಸಲು ನೋಟಿಸ್ ನೀಡಿದ್ದು ಕುಡಿಯುವ ನೀರಿನ ಬಳಕೆದಾರರು ನಿಗದಿತ ಸಮಯದಲ್ಲಿ ಪಂಚಾಯತ್ ಗೆ ಶುಲ್ಕ ಪಾವತಿಸಿದರೆ ಮೆಸ್ಕಾಂ ಇಲಾಖೆಗೆ ವಿದ್ಯುತ್ ಬಿಲ್ ಪಾವತಿಸಬಹುದು ಎಂದು ಪಂಚಾಯತ್ ಆಡಳಿತ ಮಂಡಳಿ ತಿಳಿಸಿದೆ. ಈಗಾಗಲೇ ಕುಡಿಯುವ ನೀರಿನ ಜೆಜೆಎಂ ಯೋಜನೆಯಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕುಡಿಯುವ ನೀರಿನ ಬಳಕೆದಾರರಿಗೆ ಉಪಯುಕ್ತವಾಗಲಿದೆ. ಕುಡಿಯುವ ನೀರಿಗಾಗಿ ತೆಗೆದುಕೊಂಡ ಕನೆಕ್ಷನ್ ಬೇರೆ ಉದ್ದೇಶಕ್ಕೆ ಬಳಸಿದರೆ ಕನೆಕ್ಷನ್ ಕಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related posts

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya
error: Content is protected !!