23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯಕ್ಕೆ ಫೆ.18 ರಂದು ನೂತನ ವ್ಯವಸ್ಥಾಪನ ಸಮಿತಿಯನ್ನು ನೇಮಕಗೊಳಿಸಿ ನೀಡಿದ ಆದೇಶವನ್ನು ಮಾರ್ಪಡಿಸಿ 9 ಮಂದಿಯನ್ನು ನೇಮಕಗೊಳಿಸಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮರು ಆದೇಶ ನೀಡಿದೆ.

ವ್ಯವಸ್ಥಾಪನಾ ಸಮಿತಿಗೆ ನೇಮಕಗೊಂಡ ಸದಸ್ಯರ ವಿವರ: ಪರಿಶಿಷ್ಟ ಜಾತಿ ಸ್ಥಾನದಿಂದ ಹರಿಶ್ಚಂದ್ರ ಉಪ್ಪರಪಲಿಕೆ ಕೊಕ್ಕಡ, ಮಹಿಳಾ ಸ್ಥಾನದಿಂದ ಸಿನಿ ತಂಡಶೇರಿ ಕೊಕ್ಕಡ, ಲೋಕೇಶ್ವರಿ ವಿನಯಚಂದ್ರ ವಳಂಬ್ರ ಕಡಿರುದ್ಯಾವರ, ಸಾಮಾನ್ಯ ಸ್ಥಾನದಿಂದ ಗಣೇಶ್ ಕಾಶಿ ಕಾಶಿಹೌಸ್ ಕೊಕ್ಕಡ, ಸುಬ್ರಹ್ಮಣ್ಯ ಶಬರಾಯ ವಿಶ್ವಂಬರ ಮನೆ ಕೊಕ್ಕಡ, ವಿಶ್ವನಾಥ ಕೆ. ಕೊಲಾಜೆ ಕೊಕ್ಕಡ, ಪ್ರಮೋದ್ ಕುಮಾರ್ ಶೆಟ್ಟಿ ಎಂತಿಮರ್, ಪ್ರಶಾಂತ್ ಕುಮಾರ್ ಶಾಂತಿಜೆ ಮನೆ ಕೊಕ್ರಾಡಿ ಹಾಗೂ ಪ್ರಧಾನ ಅರ್ಚಕ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದಾರೆ.

ಈ ಹಿಂದಿನ ಆದೇಶದಲ್ಲಿದ್ದ ಪ್ರಶಾಂತ್ ರೈ ಅರಂತಬೈಲು ಗೋಳಿತೊಟ್ಟು ಹಾಗೂ ಉದಯ ಶಂಕರ್ ಶೆಟ್ಟಿ ಅರಿಯಡ್ಕ ಮನೆ ಪುತ್ತೂರು ಇವರನ್ನು ಕೈಬಿಟ್ಟು ಹೊಸ ಆದೇಶದಲ್ಲಿ ಇಬ್ಬರನ್ನು ಹೊಸದಾಗಿ ಸೇರ್ಪಡೆಗೊಳಿಸಿ ಮರು ಆದೇಶ ಮಾಡಲಾಗಿದೆ.

Related posts

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!