April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

ಬೆಳ್ತಂಗಡಿ: ಎಲೆಚುಕ್ಕಿ ರೋಗದಲ್ಲಿ ಸುಳ್ಯ-ಪುತ್ತೂರು ಭಾಗದ ರೈತರು ಬೆಲೆ ನಾಶದಿಂದ ಹೈರಾಣಗಿದ್ದಾರೆ. ರೋಗಕ್ಕೆ ಸಮರ್ಪಕವಾಗಿ ಮದ್ದುಗಳು ತೋಟಗಾರಿಕೆ ಇಲಾಖೆಯಲ್ಲಿ ಸಿಗುತ್ತಿಲ್ಲ. ಪೋಷಕಾಂಶಗಳನ್ನು ನೀಡುತ್ತಿಲ್ಲ. ಔಷಧಿಗಳ ಕೊರತೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದರು.

ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದ ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಎಲೆ ಚುಕ್ಕಿ ರೋಗದ ಕುರಿತು ಧ್ವನಿ ಎತ್ತಿ, ಕೇಂದ್ರದಿಂದ ಅನುದಾನ ಬಂದರು ರೈತರ ಕೈಗೆ ಸೇರಿಲ್ಲ. ರಾಜ್ಯದಿಂದಲೂ ಅನುದಾನ ಶೀಘ್ರವಾಗಿ ಒದಗಿಸಬೇಕು ಈ ಸಮಸ್ಯೆಯನ್ನು ಬಗೆಹರಿಸಬೇಕು ಆಗ್ರಹಿಸಿದರು. ಶೀಲಿಂದ್ರ ಸಮರ್ಪಕವಾಗಿ ದೊರಕುತ್ತಿಲ್ಲ. ಗುಣ ಮಟ್ಟದ ಸುಣ್ಣ ಸಿಗುತ್ತಿಲ್ಲ. ಸರಕಾರ ರೋಗಗಕ್ಕೆ ಔಷಧಿ ಕಂಡುಕೊಳ್ಳಲು ಸುಮಾರು 50 ಲಕ್ಷ ಖರ್ಚು ಮಾಡಲಾಗಿದೆ. ಆದರೆ ವರದಿ ಇನ್ನೂ ಬಂದಿಲ್ಲ. ಪರ್ಯಾಯ ಬೆಳೆಗೆ ಕಾಫಿ ಸೂಚಿಸಿದ್ದು ಇನ್ನೂ ಶಕ್ತಿ ತುಂಬು ಕಾರ್ಯವಾಗಿಲ್ಲ. ಕೇಂದ್ರದಿಂದ ಅನುದಾನ ಬಂದರು ರಾಜ್ಯ ಸರಕಾರ ಅನುದಾನ ಮಂಜೂರು ಮಾಡಲು ತಡವರಿಸುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದರು. ಅವರೊಂದಿಗೆ ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಧ್ವನಿಗೂಡಿಸಿದರು.

ಕೇಂದ್ರದಿಂದ ಅನುದಾನ ಬಂದಿದ್ದು ರಾಜ್ಯದ ಅನುದಾನ ಜೋಡಿಕರಣ ಪ್ರಕ್ರಿಯೆ ಮಾಡಲಾಗುತ್ತಿದ್ದು ಶೀಘ್ರವೇ ನೀಡಲು ತಯಾರಿ ಮಾಡುತ್ತಿದ್ದೇವೆ. ಒಂದು ಹೇಕ್ಟೆರ್‌ಗೆ 1,200 ರೂ. ನೀಡುತ್ತಿದ್ದು ಅದು ಕಡಿಮೆ ಆಗುತ್ತದೆ ಎಂದು ಕೇಂದ್ರಕ್ಕೆ ಹೆಚ್ಚುವರಿ ಮಾಡುವಂತೆ ಮನವಿ ಕಳುಹಿಸಲಾಗಿದೆ ಎಂದು ತೋಟಗಾರಿಕಾ ಇಲಾಖಾ ಸಚಿವರು ಉತ್ತರಿಸಿದರು.

Related posts

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya
error: Content is protected !!