April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೆ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದರು.

ಅವರು ಬೆಂಗಳೂರಿನಲ್ಲಿ ಮಾ.4 ರಂದು ನಡೆದ ವಿಧಾನ ಸಭಾ ಅಧಿವೇಶನದಲ್ಲಿ ಮಾತನಾಡಿದರು. ಈ ವೇಳೆ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಕೇಳಿದಾಗ ಪ್ರವಾಸೋದ್ಯಮ ಸಚಿವರು ಈ ಬಗ್ಗೆ ನಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು , ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಬಹುತೇಕ ಯುವಕರು ಗೆದ್ದು ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಸೇರಿದಂತೆ ದೊಡ್ಡ ಅವಕಾಶ ಕರಾವಳಿ ಭಾಗದಲ್ಲಿದೆ. ಹೀಗಾಗಿ ನಮ್ಮ ಸಚಿವ ಹೆಚ್.ಕೆ ಪಾಟೀಲ್ ಅವರು ದೊಡ್ಡ ಕನಸು ಕಂಡಿದ್ದು ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Related posts

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಭಿವೃದ್ಧಿ ಅಗಲೀಕರಣ ಕಾಮಗಾರಿ ಆರಂಭ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya
error: Content is protected !!