September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೆ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದರು.

ಅವರು ಬೆಂಗಳೂರಿನಲ್ಲಿ ಮಾ.4 ರಂದು ನಡೆದ ವಿಧಾನ ಸಭಾ ಅಧಿವೇಶನದಲ್ಲಿ ಮಾತನಾಡಿದರು. ಈ ವೇಳೆ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಕೇಳಿದಾಗ ಪ್ರವಾಸೋದ್ಯಮ ಸಚಿವರು ಈ ಬಗ್ಗೆ ನಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು , ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಬಹುತೇಕ ಯುವಕರು ಗೆದ್ದು ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಸೇರಿದಂತೆ ದೊಡ್ಡ ಅವಕಾಶ ಕರಾವಳಿ ಭಾಗದಲ್ಲಿದೆ. ಹೀಗಾಗಿ ನಮ್ಮ ಸಚಿವ ಹೆಚ್.ಕೆ ಪಾಟೀಲ್ ಅವರು ದೊಡ್ಡ ಕನಸು ಕಂಡಿದ್ದು ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Related posts

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಶಿಶಿಲ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜರಿಗೆ ನೀಡಿ ಆಹ್ವಾನ

Suddi Udaya
error: Content is protected !!