22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿಯ ವಾರ್ಷಿಕ ಮಹಾಸಭೆಯು ಗೌಸಿಯಾ ಜಾಮಿಯಾ ಮಸೀದಿ ಸಭಾಂಗಣದಲ್ಲಿ ನಡೆಯಿತು.


ಮಹಾಸಭೆಯು ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ಅಧ್ಯಕ್ಷರಾದ ಅಬೂಬಕ್ಕರ್ ಸಮಡೈನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಾಸಭೆಯನ್ನು ಝೋನ್ ಸಮಿತಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫಿ ಉದ್ಘಾಟಿಸಿದರು. ವೀಕ್ಷಕರಾಗಿ ಝೋನ್ ಅಧ್ಯಕ್ಷರಾದ ಎಸ್ ಎಂ ಕೋಯ ತಂಙಳ್ ಉಜಿರೆ ಆಗಮಿಸಿದ್ದರು. ಸರ್ಕಲ್ ಉಸ್ತುವಾರಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಗುರುವಾಯನಕೆರೆ ವಿಷಯ ಮಂಡಿಸಿದರು. ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನೂತನ ಸಮಿತಿ ರಚನೆಯ ಆಯ್ಕೆ ಪ್ರಕ್ರಿಯೆಗಳಿಗೆ ನೇತೃತ್ವ ನೀಡಿದರು.

ಸರ್ಕಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಇಂದಬೆಟ್ಟು ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರಗಳನ್ನು ಮಂಡಿಸಿದರು.
ಮುಂದಿನ ಸಂಘಟನಾ ಅವಧಿಯ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಅಬೂಬಕ್ಕರ್ ಸಮಡೈನ್ ಪುನರಾಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಸಾಮಾಜಿಕ ಕಾರ್ಯಕರ್ತ ಮೆಹಬೂಬ್ ಸಂಜಯನಗರ ಹಾಗೂ ಕೋಶಾಧಿಕಾರಿಯಾಗಿ ಸಂಘಟಕ ಪಿ ಯು ಅಬ್ದುಲ್ ರಹ್ಮಾನ್ ಮುಸ್ಲಿಯಾರ್ ನಾವೂರು, ಉಪಾಧ್ಯಕ್ಷರಾಗಿ ಆದಂ ಸಾಹೇಬ್ ಮಂಜೊಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಎನ್ ಎಸ್ ಅಬ್ದುಲ್ ರಹ್ಮಾನ್ ಸಂಜಯನಗರ, ದಅವಾ ಕಾರ್ಯದರ್ಶಿಯಾಗಿ ಪಿ ಯು ಆಲಿಕುಂಞ ಸಖಾಫಿ ನಾವೂರು ,ಇಸಾಬಾ ಕಾರ್ಯದರ್ಶಿಯಾಗಿ ಬಿ ಎಂ ರಮ್ಲಾನ್ ಮೈಕೆ, ಸಾಂತ್ವನ ಕಾರ್ಯದರ್ಶಿಯಾಗಿ ಹಮೀದ್ ಇಂದಬೆಟ್ಟು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಎಂ ಎಚ್ ಅಬ್ದುಲ್ಲಾ ಮಲೆಬೆಟ್ಟು, ಮೀಡಿಯಾ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಕೇಳ್ತಾಜೆ ಇವರನ್ನು ಆಯ್ಕೆ ಮಾಡಲಾಯಿತು. ಒಂಭತ್ತು ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಯ್ಕೆ ಮಾಡಲಾಯಿತು.


ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಇಂದಬೆಟ್ಟು ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಮೆಹಬೂಬ್ ಸಂಜಯನಗರ ಧನ್ಯವಾದಕವಿತ್ತರು.

Related posts

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ

Suddi Udaya
error: Content is protected !!