April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

ಮಡಂತ್ಯಾರು: ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತೀಯ ಅಭ್ಯರ್ಥಿಗಳು 9 ಸ್ಥಾನಗಳನ್ನು ಪಡೆದು ಬಹುಮತದೊಂದಿಗೆ ಸೊಸೈಟಿಯ ಅಧಿಕಾರವನ್ನು ಪಡೆದುಕೊಂಡ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿ, ನೂತನ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

ಚುನಾವಣಾ ಪ್ರಭಾರಿ ಪದ್ಮನಾಭ ಅರ್ಕಜೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜೋಯೇಲ್ ಮೆಂಡೋನ್ಸಾ ಹಾಗೂ ಉಪಾಧ್ಯಕ್ಷರಾದ ಕಾಂತಪ್ಪ ಗೌಡ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರನ್ನು ಅಭಿನಂದಿಸಿ ಮಾತನಾಡಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಶ್ರಮದಿಂದ ಸಹಕಾರಿ ಭಾರತೀಯ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮುಂದೆ ಈ ಸೊಸೈಟಿಯನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವುದರೊಂದಿಗೆ, ಕೃಷಿಕರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ಸಲಹೆ ನೀಡಿದರು.

ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರು ಮಾತನಾಡಿ ಚುನಾವಣೆ ಪ್ರಾರಂಭದಿಂದ ಇಂದಿನವರೆಗೆ ಕಾರ್ಯಕರ್ತರ ಶ್ರಮವನ್ನು ಗೌರವಿಸುತ್ತೇನೆ. ಕಾರ್ಯಕರ್ತರಿಂದ ಪಕ್ಷ ಎಂಬುದಕ್ಕೆ ಮಡಂತ್ಯಾರು ಸಿಎ ಬ್ಯಾಂಕಿನ ಚುನಾವಣೆ ಉದಾಹರಣೆ. ರೈತಾಪಿ ಜನರ ಸಮಸ್ಯೆಗಳಿಗೆ ಸ್ಪಂದಿಸುವುದರೊಂದಿಗೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ನೂತನ‌ ನಿರ್ದೇಶಕರಾದ ಶ್ರೀಮತಿ ಧನಲಕ್ಷ್ಮಿ ಜನಾರ್ಧನ್, ಅಮಿತಾ, ಪ್ರೀಯಾ, ಮಹಾಬಲ, ಸುರೇಶ್ ಎಸ್, ಗೋಪಾಲಕೃಷ್ಣ, ಗಣೇಶ್ ಮೂಲ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಮರೋಡಿ, ಪ್ರಮುಖರಾದ ಸದಾನಂದ ಪೂಜಾರಿ ಉಂಗೀಲಬೈಲು, ಶೈಲೇಶ್ ಪುಲಿಮಜಲು, ಜಯಂತ್ ಗೌಡ ಗುರಿಪಲ್ಲ, ವಿಶ್ವನಾಥ ಪೂಜಾರಿ ಹಾರಬೆ, ನಂದ ಕುಮಾರ್, ದಿನೇಶ್ ಕರ್ಕೇರ ಸೋಣಂದೂರು, ರತ್ನಾಕರ ಶೆಟ್ಟಿ ಸೋಣಂದೂರು, ಹಂಸರಾಜ್ ಬುಣ್ಣಾಲ್, ಧರ್ಣಪ್ಪ ಗೌಡ, ವಸಂತಿ ಲಕ್ಷ್ಮಣ ಮಚ್ಚಿನ, ಬೇಬಿ ಸುಸಾನ, ರಾಜೇಶ್ ಕೊಡಿಯೂರು, ಪುರುಷೋತ್ತಮ ಶೆಟ್ಟಿ ಸೋಣಂದೂರು, ಲ್ಯಾನ್ಸಿ ಪಿಂಟೋ ಮಡಂತ್ಯಾರು, ಪ್ರಾನ್ಸಿಸ್ ವಿ.ವಿ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya
error: Content is protected !!