ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

ಬೆಳ್ತಂಗಡಿ: ಕಳೆದ 16 ವರ್ಷಗಳಿಂದ ಉಜಿರೆ ಕಾಶಿಬೆಟ್ಟು ಎಂಬಲ್ಲಿ ಸಯ್ಯಿದ್ ಉಜಿರೆ ತಂಙಳ್ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಲ್‌ಜ‌ಅ ಎಜುಕೇಶನ್, ದ‌ಅವಾ ಏಂಡ್ ರಿಲೀಫ್ ಟ್ರಸ್ಟ್ ಇದರ ವತಿಯಿಂದ ಈ ಬಾರಿ ರಂಝಾನ್ 27 ರ “ಸಂಭವನೀಯ ಲೈಲತುಲ್ ಕದರ್” ಪುಣ್ಯ ರಾತ್ರಿಯಂದು ಬೃಹತ್ ಮಟ್ಟದ ಪ್ರಾರ್ಥನಾ ಸಮ್ಮೇಳನ ನಡೆಸುವರೇ ಗಣ್ಯರ ಸಮಾಲೋಚನಾ ಸಭೆಯು ಮಲ್‌ಜ‌ಅ ಇಂಗ್ಲೀಷ್ ಮೀಡಿಯಂ ಕ್ಯಾಂಪಸ್ ನಲ್ಲಿ ನಡೆಯಿತು.


ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಶಿಲ್ಪಿ ಸಯ್ಯಿದ್ ಅಲವಿ ಜಲಾಲುದ್ದೀನ್ ಉಜಿರೆ ತಂಙಳ್ ಮಾರ್ಗದರ್ಶನ ಹಾಗೂ ಯೋಜನೆಯ ವಿವರ ನೀಡಿದರು.
ವೇದಿಕೆಯಲ್ಲಿದ್ದ ಪ್ರಾರ್ಥನಾ ಸಮ್ಮೇಳನದ ಪೂರ್ವಾಧ್ಯಕ್ಷ ಹಾಜಿ ಅಬ್ದುಲ್ ಲೆತೀಫ್ ಗುರುವಾಯನಕೆರೆ, ಹಮೀದ್ ಸ‌ಅದಿ ಕಳೆಂಜಿಬೈಲು, ಬಟ್ಲಡ್ಕ ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ, ಹಾಜಿ ಹಸೈನಾರ್ ಶಾಫಿ ಗುರುವಾಯನಕೆರೆ, ಮಲ್‌ಜ‌ಅ ಪ್ರಧಾನ ಧರ್ಮಗುರು ಸಯ್ಯಿದ್ ಫಹೀಮ್ ತಂಙಳ್ ಮಂಜೇಶ್ವರ, ಖಾಲಿದ್ ಮುಸ್ಲಿಯಾರ್ ಕುಂಟಿನಿ, ಎ ಅಹ್ಮದ್ ಬಶೀರ್ ಪಂಜಿಮೊಗರು, ಮೊದಲಾದವರು ಸಂದರ್ಭೋಚಿತವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.


ಈ ಹಿಂದೆ ಮೂರು ಬಾರಿ ಪ್ರಾರ್ಥನಾ ಸಮ್ಮೇಳನ ಯಶಸ್ವಿಯಾಗಿ ನಡೆದಿದ್ದು ಈ‌ಬಾರಿ ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮ ನಡೆಸುವುದೆಂದು ತೀರ್ಮಾನಿಸಲಾಯಿತು.‌
ಸಮಾಲೀಚನಾ ಸಭೆಯಲ್ಲಿ ಎಸ್ಸೆಸ್ಸೆಫ್, ಎಸ್‌ವೈಎಸ್, ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಮೆನೇಜ್ ಮೆಂಟ್ ಅಸೋಸಿಯೇಷನ್, ಎಸ್ ಜೆ ಯು, ಸಂಯುಕ್ತ ಜಮಾಅತ್ ಸಹಿತ ಸುನ್ನೀ‌ ಸಂಘ ಕುಟುಂಬದ ಪದಾಧಿಕಾರಿಗಳು, ವಿವಿಧ ಜಮಾಅತ್ ಪ್ರತಿನಿಧಿಗಳು ಭಾಗವಹಿಸಿದ್ದರು.
ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಸ್ಚಾಗತಿಸಿ ಪ್ರಸ್ತಾವನೆ ಮಂಡಿಸಿದರು. ಸಂಸ್ಥೆಯ ಪಿಆರ್‌ಒ ಶರೀಫ್ ಬೆರ್ಕಳ ಕಾರ್ಯಕ್ರಮ ನಿರೂಪಿಸಿದರು.


ಈ ವೇಳೆ ಉಳ್ಳಾಳ ಉರೂಸ್ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಪ್ರಾರ್ಥನಾ ಸಂಗಮದ ಸ್ವಾಗತ ಸಮಿತಿ‌ರಚಿಸಲಾಗಿ ಚೇರ್ಮೆನ್ ಆಗಿ ಹಾಜಿ ಹೈನಾರ್ ಶಾಫಿ ಗುರುವಾಯನಕೆರೆ, ಜನರಲ್ ಕನ್ವೀನರ್ ಆಗಿ ಅಶ್ರಫ್ ಆಲಿಕುಂಞಿ ಮುಂಡಾಜೆ, ಫೈನಾನ್ಸ್ ಸೆಕ್ರೆಟರಿ ಯಾಗಿ ಶಂಶುದ್ದೀನ್ ಜಾರಿಗೆಬೈಲು ಇವರನ್ನು ಆರಿಸಲಾಯಿತು. ‌ಉಳಿದಂತೆ ವಿವಿಧ ವಿಭಾಗಗಳನ್ನೊಳಗೊಂಡ 45 ಮಂದಿಯ ಸಮಿತಿ‌ ರಚಿಸಲಾಯಿತು.

Related posts

ಜೂ. 21: ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!