April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

ಬೆಳ್ತಂಗಡಿ: ದಾನಿಗಳ ಸಹಕಾರದೊಂದಿಗೆ ಮಾ.4 ರಂದು ಮದ್ದಡ್ಕದ ಸಮಾಜ‌ಸೇವಕ ಅಬ್ಬೋನು ಮದ್ದಡ್ಕ ಅವರ ನಿವಾಸದಲ್ಲಿ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರದ ಕಿಟ್ ವಿತರಣೆ, ಝಕಾತ್ ದಾನ ನಿಧಿ, ಹಾಗೂ‌ ಅರ್ಹ ಫಲಾನುಭವಿಗಳಿಗೆ ಚಿಕಿತ್ಸೆಗೆ ಧನಸಹಾಯ ಮತ್ತು ಶೈಕ್ಷಣಿಕ ನಿಧಿ ಹಸ್ತಾಂತರ ಕಾರ್ಯಕ್ರಮ ಜರುಗಿತು.

ಇಂಡಿಯನ್ ಆಸ್ಪತ್ರೆ ಮಂಗಳೂರು ಇದರ ಚೇರ್ಮೆನ್, ಖ್ಯಾತ ಹೃದಯರೋಗ ತಜ್ಞ ಡಾ. ಯೂಸುಫ್ ಕುಂಬ್ಲೆ ಅವರ ತಾಯಿಯ ಹೆಸರಿನಲ್ಲಿರುವ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ ತಲಾ 2 ಸಾವಿರದಂತೆ 50 ಕುಟುಂಬಗಳಿಗೆ 1 ಲಕ್ಷ ರೂ ವೆಚ್ಚದಲ್ಲಿ ರಂಝಾನ್ ಆಹಾರ ಸಾಮಾಗ್ರಿಗಳ ಕಿಟ್ ಹಸ್ತಾಂತರಿಸಲಾಯಿತು.


ಇದೇ ವೇಳೆ ಜಮೀಯತುಲ್ ಫಲಾಹ್ ಉಡುಪಿ ದ.ಕ ಘಟಕದ ಪೂರ್ವ ಜಿಲ್ಲಾಧ್ಯಕ್ಷ, ಹಿರಿಯ ಸಾಮಾಜಿಕ ಮುತ್ಸದ್ದಿ ಹಾಜಿ ಅಬ್ದುಲ್‌ ಲೆತೀಫ್ ಸಾಹೇಬ್ ಅವರ ವತಿಯಿಂದ 30 ಕುಟುಂಬಗಳಿಗೆ ತಲಾ 1500 ರಂತೆ ಝಕಾತ್ ದಾನ ನಿಧಿ ವಿತರಿಸಲಾಯಿತು. ಉಳಿದ ಒಂದು ಲಕ್ಷ ರೂ. ಗಳನ್ನು ಜಮೀಯತುಲ್ ಫಲಾಹ್ ಮೂಲಕ ನೀಡುವುದೆಂದು ಅವರು ಈ ವೇಳೆ ಘೋಷಿಸಿದರು.
ಹೊಟೇಲ್ ನಲ್ಲಿ ಕೂಲಿ ಕಾರ್ಮಿಕನಾಗಿದ್ದರೂ ತನ್ನ ಮೂವರು ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ನೀಡುತ್ತಿರುವ ಕುಟುಂಬಕ್ಕೆ ಅಬ್ಬೋನು ಮದ್ದಡ್ಕ ಅವರ ಫ್ಯಾಮಿಲಿಯ ವತಿಯಿಂದ ಶೈಕ್ಷಣಿಕ ನಿಧಿ ಹಸ್ತಾಂತರ ಹಾಗೂ ಮೂರು ಮಂದಿ ತೀರಾ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಫಲಾನುಭವಿಗಳಿಗೆ ಚಿಕಿತ್ಸಾ ವೆಚ್ಚವನ್ನು ನೀಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಹಾಜಿ ಅಬ್ದುಲ್ ಲೆತೀಫ್ ಸಾಹೇಬ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಟ್ಲ ಒಕ್ಕೆತ್ತೂರು ಮಸ್ಜಿದ್ ಧರ್ಮಗುರು ರಫೀಕ್ ಅಹ್ಸನಿ, ಮಲ್‌ಜ‌ಅ ಪ್ರಾರ್ಥನಾ ಸಮ್ಮೇಳನ ಸ್ವಾಗತ ಸಮಿತಿ ಚೇರ್ಮೆನ್ ಹಾಜಿ ಹಸೈನಾರ್ ಶಾಫಿ ಗುರುವಾಯನಕೆರೆ, ಮದ್ದಡ್ಕ ನೂರುಲ್ ಹುದಾ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಶ್ರಫ್ ಚಿಲಿಂಬಿ ಇವರು ಶುಭ ಕೋರಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ಕೋಶಾಧಿಕಾರಿ ಎಂ.ಹೆಚ್ ಅಬೂಬಕ್ಕರ್, ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಅಧ್ಯಕ್ಷ ಎಂ‌.ಹೆಚ್ ಹಸನಬ್ಬ, ಹಿರಿಯರಾದ ಪುತ್ತಾಕ ಮೊದಲಾದವರು ಉಪಸ್ಥಿತರಿದ್ದರು.


ಕಾರ್ಯಕ್ರಮ ಸಂಯೋಜಿಸಿದ ಸಮಾಜ ಸೇವಕ‌ ಅಬ್ಬೋನು ಮದ್ದಡ್ಕ ಅವರ ಕಾರ್ಯವನ್ನು ಅತಿಥಿಗಳು ಅಭಿನಂದಿಸಿದರು.
ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya
error: Content is protected !!