30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ: ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಬಿ-ಖಾತೆಯಿಂದ ಆಗುತ್ತಿರುವ ತೊಂದರೆ ಕುರಿತು ವಿಷಯ ಪ್ರಸ್ತಾಪಿಸಿದರು.

ಮೂಡದಲ್ಲಿ ಸಿಬ್ಬಂದಿಗಳು ಇಲ್ಲ. ವಿನ್ಯಾಸ ನಕ್ಷೆ ನೀಡಿದರೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಲು ಆಗುತ್ತದೆ. ಬೆಂಗಳೂರನ್ನು ಇಟ್ಟಕೊಂಡು ರಾಜ್ಯವನ್ನು ತುಲಣೆ ಮಾಡುವುದು ಬೇಡ. ಗ್ರಾಮದಲ್ಲಿ ಕಂದಾಯ ಇಲಾಖೆ ಕರ್ನ್ವ್ಷನ್ ಮಾಡಿರುವ ಜಾಗ. ಮನೆ ಕಟ್ಟಿರುವ ಜಾಗಗಳಿಗೆ ಫಾರ್ಮ-3ಎ ನೀಡಿ. ಈಗ ಡೋರ್ ನಂಬ್ರ ಸಿಕ್ಕಿದೆ ಸರಕಾರಕ್ಕೆ ತೆರಿಗೆ ಸಿಕ್ಕಿದೆ ಇದರಿಂದ ಏನು ಪ್ರಯೋಜನ. ಬೆಂಗಳೂರಿನಲ್ಲಿ ನಡೆಯುವ ಅವಾಂತರಗಳಿಗೆ ಗ್ರಾಮೀಣ ಪ್ರದೇಶದ ಸಣ್ಣ ಸೈಟ್‌ಗಳಿಗೆ ಅನ್ವಯ ಮಾಡಬೇಡಿ. ಅಂತವರಿಗೆ ವಿಶೇಷ ರಿಯಾಯಿತಿ ನೀಡಿ. ಫಾರ್ಮ್ ನಂಬ್ರ-3 ನೀಡಿ ಎಂದು ಒತ್ತಾಯಿಸಿದ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಈ ಬಗ್ಗೆ ಗಮನಹರಿಸಲಾಗುವುದು. ಎಲ್ಲ ಜನರ ಸಮಸ್ಯೆ ಬಗೆಹರಿಯಬೇಕು. ಸಲಹೆಯನ್ನು ಸ್ವೀಕರಿಸಲಾಗುವುದು ಎಂದು ಪೌರಡಳಿತ ಸಚಿವರು ಉತ್ತರಿಸಿದರು.

Related posts

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya
error: Content is protected !!