23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ: ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಬಿ-ಖಾತೆಯಿಂದ ಆಗುತ್ತಿರುವ ತೊಂದರೆ ಕುರಿತು ವಿಷಯ ಪ್ರಸ್ತಾಪಿಸಿದರು.

ಮೂಡದಲ್ಲಿ ಸಿಬ್ಬಂದಿಗಳು ಇಲ್ಲ. ವಿನ್ಯಾಸ ನಕ್ಷೆ ನೀಡಿದರೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಲು ಆಗುತ್ತದೆ. ಬೆಂಗಳೂರನ್ನು ಇಟ್ಟಕೊಂಡು ರಾಜ್ಯವನ್ನು ತುಲಣೆ ಮಾಡುವುದು ಬೇಡ. ಗ್ರಾಮದಲ್ಲಿ ಕಂದಾಯ ಇಲಾಖೆ ಕರ್ನ್ವ್ಷನ್ ಮಾಡಿರುವ ಜಾಗ. ಮನೆ ಕಟ್ಟಿರುವ ಜಾಗಗಳಿಗೆ ಫಾರ್ಮ-3ಎ ನೀಡಿ. ಈಗ ಡೋರ್ ನಂಬ್ರ ಸಿಕ್ಕಿದೆ ಸರಕಾರಕ್ಕೆ ತೆರಿಗೆ ಸಿಕ್ಕಿದೆ ಇದರಿಂದ ಏನು ಪ್ರಯೋಜನ. ಬೆಂಗಳೂರಿನಲ್ಲಿ ನಡೆಯುವ ಅವಾಂತರಗಳಿಗೆ ಗ್ರಾಮೀಣ ಪ್ರದೇಶದ ಸಣ್ಣ ಸೈಟ್‌ಗಳಿಗೆ ಅನ್ವಯ ಮಾಡಬೇಡಿ. ಅಂತವರಿಗೆ ವಿಶೇಷ ರಿಯಾಯಿತಿ ನೀಡಿ. ಫಾರ್ಮ್ ನಂಬ್ರ-3 ನೀಡಿ ಎಂದು ಒತ್ತಾಯಿಸಿದ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಈ ಬಗ್ಗೆ ಗಮನಹರಿಸಲಾಗುವುದು. ಎಲ್ಲ ಜನರ ಸಮಸ್ಯೆ ಬಗೆಹರಿಯಬೇಕು. ಸಲಹೆಯನ್ನು ಸ್ವೀಕರಿಸಲಾಗುವುದು ಎಂದು ಪೌರಡಳಿತ ಸಚಿವರು ಉತ್ತರಿಸಿದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya
error: Content is protected !!