September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ: ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಬಿ-ಖಾತೆಯಿಂದ ಆಗುತ್ತಿರುವ ತೊಂದರೆ ಕುರಿತು ವಿಷಯ ಪ್ರಸ್ತಾಪಿಸಿದರು.

ಮೂಡದಲ್ಲಿ ಸಿಬ್ಬಂದಿಗಳು ಇಲ್ಲ. ವಿನ್ಯಾಸ ನಕ್ಷೆ ನೀಡಿದರೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಲು ಆಗುತ್ತದೆ. ಬೆಂಗಳೂರನ್ನು ಇಟ್ಟಕೊಂಡು ರಾಜ್ಯವನ್ನು ತುಲಣೆ ಮಾಡುವುದು ಬೇಡ. ಗ್ರಾಮದಲ್ಲಿ ಕಂದಾಯ ಇಲಾಖೆ ಕರ್ನ್ವ್ಷನ್ ಮಾಡಿರುವ ಜಾಗ. ಮನೆ ಕಟ್ಟಿರುವ ಜಾಗಗಳಿಗೆ ಫಾರ್ಮ-3ಎ ನೀಡಿ. ಈಗ ಡೋರ್ ನಂಬ್ರ ಸಿಕ್ಕಿದೆ ಸರಕಾರಕ್ಕೆ ತೆರಿಗೆ ಸಿಕ್ಕಿದೆ ಇದರಿಂದ ಏನು ಪ್ರಯೋಜನ. ಬೆಂಗಳೂರಿನಲ್ಲಿ ನಡೆಯುವ ಅವಾಂತರಗಳಿಗೆ ಗ್ರಾಮೀಣ ಪ್ರದೇಶದ ಸಣ್ಣ ಸೈಟ್‌ಗಳಿಗೆ ಅನ್ವಯ ಮಾಡಬೇಡಿ. ಅಂತವರಿಗೆ ವಿಶೇಷ ರಿಯಾಯಿತಿ ನೀಡಿ. ಫಾರ್ಮ್ ನಂಬ್ರ-3 ನೀಡಿ ಎಂದು ಒತ್ತಾಯಿಸಿದ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಈ ಬಗ್ಗೆ ಗಮನಹರಿಸಲಾಗುವುದು. ಎಲ್ಲ ಜನರ ಸಮಸ್ಯೆ ಬಗೆಹರಿಯಬೇಕು. ಸಲಹೆಯನ್ನು ಸ್ವೀಕರಿಸಲಾಗುವುದು ಎಂದು ಪೌರಡಳಿತ ಸಚಿವರು ಉತ್ತರಿಸಿದರು.

Related posts

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya
error: Content is protected !!