37.8 C
ಪುತ್ತೂರು, ಬೆಳ್ತಂಗಡಿ
March 4, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

ಬೆಳ್ತಂಗಡಿ: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳಕೂಟ ಮಾ. 30 ನಡೆಯಲಿದ್ದು. ಇದರ ಪದಾಧಿಕಾರಿಗಳ ಸಭೆಯು ಮಾ. 3 ರಂದು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್ ರ ಅಧ್ಯಕ್ಷತೆಯಲ್ಲಿ ಜರಗಿತು.

ಸುದೀರ್ಘ 31ವರ್ಷಗಳಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ದಿ. ಕೆ ವಸಂತ ಬಂಗೇರ ರವರು ಸೇವೆ ಸಲ್ಲಿಸಿದ್ದು. ಮುಂದಕ್ಕೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಆಯ್ಕೆ ಮಾಡಲಾಯಿತು. ಗೌರವ ಮಾರ್ಗದರ್ಶಕರಾಗಿ ಶ್ರೀಮತಿ ಸುಜಿತಾ ವಸಂತ ಬಂಗೇರ ರವರನ್ನು ಮತ್ತು ಅಧ್ಯಕ್ಷರನ್ನಾಗಿ ನಿತೀಶ್ ಹೆಚ್ ಕೋಟ್ಯಾನ್, ಕಾರ್ಯಾಧ್ಯಕ್ಷರಾಗಿ ಶೇಖರ್ ಕುಕ್ಕೇಡಿ, ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಭರತರಾಜ್ ಜೈನ್ ಪಾಪುದಡ್ಕಗುತ್ತು,ಕೋಶಾಧಿಕಾರಿ ಅಶೋಕ್ ಪಾಣೂರು ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya
error: Content is protected !!