25.7 C
ಪುತ್ತೂರು, ಬೆಳ್ತಂಗಡಿ
April 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್


ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನ 2024-2025 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತೆಗೆದುಕೊಂಡ ತಿರ್ಮಾನದಂತೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮಂಡಳಿಯು ನಿರ್ಣಯ ಕೈಗೊಂಡು ಕುಡಿಯುವ ನೀರಿನ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು ಮಾ. 1ರಂದು ಮೊದಲ ಹಂತದಲ್ಲಿ ಲಿಂಗಾಂತ್ಯಾರು ಹಾಗೂ ಪಿಚಲಾರು ಪ್ರದೇಶದಲ್ಲಿ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪಂಪ್ ಆಪರೇಟರ್ ಹಾಗೂ ಸ್ಥಳೀಯರ ಸಮಕ್ಷಮದಲ್ಲಿ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸಲಾಯಿತು.

ಈಗಾಗಲೇ ಗ್ರಾಮ ಪಂಚಾಯತ್ ಕುಡಿಯುವ ನೀರಿನ ಶುಲ್ಕ ಬಾಕಿ ಇರುವವರಿಗೆ ಪಂಚಾಯತ್ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿ ನೋಟಿಸ್ ನೀಡಲಾಗಿದ್ದು ಹಲವರು ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿ ಶುಲ್ಕ ಪಾವತಿಸಿರುತ್ತಾರೆ, ಇನ್ನು ಶುಲ್ಕ ಪಾವತಿಸದ ಗ್ರಾಮದ ಇತರ ಭಾಗಗಳಲ್ಲಿ ನೀರಿನ ಸಂಪರ್ಕ ಮುಂದಿನ ಹಂತದಲ್ಲಿ ಕಡಿತಗೊಳಿಸಲಾಗುವುದು, ಈಗಾಗಲೇ ಮೆಸ್ಕಾಂ ಇಲಾಖೆ ಕುಡಿಯುವ ನೀರಿನ ವಿದ್ಯುತ್ ಸ್ಥಾವರದ ಬಿಲ್ ಪಾವತಿಸಲು ನೋಟಿಸ್ ನೀಡಿದ್ದು ಕುಡಿಯುವ ನೀರಿನ ಬಳಕೆದಾರರು ನಿಗದಿತ ಸಮಯದಲ್ಲಿ ಪಂಚಾಯತ್ ಗೆ ಶುಲ್ಕ ಪಾವತಿಸಿದರೆ ಮೆಸ್ಕಾಂ ಇಲಾಖೆಗೆ ವಿದ್ಯುತ್ ಬಿಲ್ ಪಾವತಿಸಬಹುದು ಎಂದು ಪಂಚಾಯತ್ ಆಡಳಿತ ಮಂಡಳಿ ತಿಳಿಸಿದೆ. ಈಗಾಗಲೇ ಕುಡಿಯುವ ನೀರಿನ ಜೆಜೆಎಂ ಯೋಜನೆಯಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕುಡಿಯುವ ನೀರಿನ ಬಳಕೆದಾರರಿಗೆ ಉಪಯುಕ್ತವಾಗಲಿದೆ. ಕುಡಿಯುವ ನೀರಿಗಾಗಿ ತೆಗೆದುಕೊಂಡ ಕನೆಕ್ಷನ್ ಬೇರೆ ಉದ್ದೇಶಕ್ಕೆ ಬಳಸಿದರೆ ಕನೆಕ್ಷನ್ ಕಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related posts

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!