23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್


ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನ 2024-2025 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತೆಗೆದುಕೊಂಡ ತಿರ್ಮಾನದಂತೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮಂಡಳಿಯು ನಿರ್ಣಯ ಕೈಗೊಂಡು ಕುಡಿಯುವ ನೀರಿನ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು ಮಾ. 1ರಂದು ಮೊದಲ ಹಂತದಲ್ಲಿ ಲಿಂಗಾಂತ್ಯಾರು ಹಾಗೂ ಪಿಚಲಾರು ಪ್ರದೇಶದಲ್ಲಿ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪಂಪ್ ಆಪರೇಟರ್ ಹಾಗೂ ಸ್ಥಳೀಯರ ಸಮಕ್ಷಮದಲ್ಲಿ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸಲಾಯಿತು.

ಈಗಾಗಲೇ ಗ್ರಾಮ ಪಂಚಾಯತ್ ಕುಡಿಯುವ ನೀರಿನ ಶುಲ್ಕ ಬಾಕಿ ಇರುವವರಿಗೆ ಪಂಚಾಯತ್ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿ ನೋಟಿಸ್ ನೀಡಲಾಗಿದ್ದು ಹಲವರು ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿ ಶುಲ್ಕ ಪಾವತಿಸಿರುತ್ತಾರೆ, ಇನ್ನು ಶುಲ್ಕ ಪಾವತಿಸದ ಗ್ರಾಮದ ಇತರ ಭಾಗಗಳಲ್ಲಿ ನೀರಿನ ಸಂಪರ್ಕ ಮುಂದಿನ ಹಂತದಲ್ಲಿ ಕಡಿತಗೊಳಿಸಲಾಗುವುದು, ಈಗಾಗಲೇ ಮೆಸ್ಕಾಂ ಇಲಾಖೆ ಕುಡಿಯುವ ನೀರಿನ ವಿದ್ಯುತ್ ಸ್ಥಾವರದ ಬಿಲ್ ಪಾವತಿಸಲು ನೋಟಿಸ್ ನೀಡಿದ್ದು ಕುಡಿಯುವ ನೀರಿನ ಬಳಕೆದಾರರು ನಿಗದಿತ ಸಮಯದಲ್ಲಿ ಪಂಚಾಯತ್ ಗೆ ಶುಲ್ಕ ಪಾವತಿಸಿದರೆ ಮೆಸ್ಕಾಂ ಇಲಾಖೆಗೆ ವಿದ್ಯುತ್ ಬಿಲ್ ಪಾವತಿಸಬಹುದು ಎಂದು ಪಂಚಾಯತ್ ಆಡಳಿತ ಮಂಡಳಿ ತಿಳಿಸಿದೆ. ಈಗಾಗಲೇ ಕುಡಿಯುವ ನೀರಿನ ಜೆಜೆಎಂ ಯೋಜನೆಯಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕುಡಿಯುವ ನೀರಿನ ಬಳಕೆದಾರರಿಗೆ ಉಪಯುಕ್ತವಾಗಲಿದೆ. ಕುಡಿಯುವ ನೀರಿಗಾಗಿ ತೆಗೆದುಕೊಂಡ ಕನೆಕ್ಷನ್ ಬೇರೆ ಉದ್ದೇಶಕ್ಕೆ ಬಳಸಿದರೆ ಕನೆಕ್ಷನ್ ಕಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya
error: Content is protected !!