September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್


ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನ 2024-2025 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತೆಗೆದುಕೊಂಡ ತಿರ್ಮಾನದಂತೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮಂಡಳಿಯು ನಿರ್ಣಯ ಕೈಗೊಂಡು ಕುಡಿಯುವ ನೀರಿನ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು ಮಾ. 1ರಂದು ಮೊದಲ ಹಂತದಲ್ಲಿ ಲಿಂಗಾಂತ್ಯಾರು ಹಾಗೂ ಪಿಚಲಾರು ಪ್ರದೇಶದಲ್ಲಿ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪಂಪ್ ಆಪರೇಟರ್ ಹಾಗೂ ಸ್ಥಳೀಯರ ಸಮಕ್ಷಮದಲ್ಲಿ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸಲಾಯಿತು.

ಈಗಾಗಲೇ ಗ್ರಾಮ ಪಂಚಾಯತ್ ಕುಡಿಯುವ ನೀರಿನ ಶುಲ್ಕ ಬಾಕಿ ಇರುವವರಿಗೆ ಪಂಚಾಯತ್ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿ ನೋಟಿಸ್ ನೀಡಲಾಗಿದ್ದು ಹಲವರು ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿ ಶುಲ್ಕ ಪಾವತಿಸಿರುತ್ತಾರೆ, ಇನ್ನು ಶುಲ್ಕ ಪಾವತಿಸದ ಗ್ರಾಮದ ಇತರ ಭಾಗಗಳಲ್ಲಿ ನೀರಿನ ಸಂಪರ್ಕ ಮುಂದಿನ ಹಂತದಲ್ಲಿ ಕಡಿತಗೊಳಿಸಲಾಗುವುದು, ಈಗಾಗಲೇ ಮೆಸ್ಕಾಂ ಇಲಾಖೆ ಕುಡಿಯುವ ನೀರಿನ ವಿದ್ಯುತ್ ಸ್ಥಾವರದ ಬಿಲ್ ಪಾವತಿಸಲು ನೋಟಿಸ್ ನೀಡಿದ್ದು ಕುಡಿಯುವ ನೀರಿನ ಬಳಕೆದಾರರು ನಿಗದಿತ ಸಮಯದಲ್ಲಿ ಪಂಚಾಯತ್ ಗೆ ಶುಲ್ಕ ಪಾವತಿಸಿದರೆ ಮೆಸ್ಕಾಂ ಇಲಾಖೆಗೆ ವಿದ್ಯುತ್ ಬಿಲ್ ಪಾವತಿಸಬಹುದು ಎಂದು ಪಂಚಾಯತ್ ಆಡಳಿತ ಮಂಡಳಿ ತಿಳಿಸಿದೆ. ಈಗಾಗಲೇ ಕುಡಿಯುವ ನೀರಿನ ಜೆಜೆಎಂ ಯೋಜನೆಯಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕುಡಿಯುವ ನೀರಿನ ಬಳಕೆದಾರರಿಗೆ ಉಪಯುಕ್ತವಾಗಲಿದೆ. ಕುಡಿಯುವ ನೀರಿಗಾಗಿ ತೆಗೆದುಕೊಂಡ ಕನೆಕ್ಷನ್ ಬೇರೆ ಉದ್ದೇಶಕ್ಕೆ ಬಳಸಿದರೆ ಕನೆಕ್ಷನ್ ಕಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಎಚ್‌.ಪಿ.ವಿ. ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಚಿಣ್ಣರ ಯೋಗ ಶಿಬಿರ ಉದ್ಘಾಟನೆ

Suddi Udaya
error: Content is protected !!