25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್


ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನ 2024-2025 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತೆಗೆದುಕೊಂಡ ತಿರ್ಮಾನದಂತೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮಂಡಳಿಯು ನಿರ್ಣಯ ಕೈಗೊಂಡು ಕುಡಿಯುವ ನೀರಿನ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು ಮಾ. 1ರಂದು ಮೊದಲ ಹಂತದಲ್ಲಿ ಲಿಂಗಾಂತ್ಯಾರು ಹಾಗೂ ಪಿಚಲಾರು ಪ್ರದೇಶದಲ್ಲಿ ಪಂಚಾಯತ್ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪಂಪ್ ಆಪರೇಟರ್ ಹಾಗೂ ಸ್ಥಳೀಯರ ಸಮಕ್ಷಮದಲ್ಲಿ ಶುಲ್ಕ ಪಾವತಿಸದ ಮನೆಯವರ ನೀರಿನ ಸಂಪರ್ಕ ಕಡಿತಗೊಳಿಸಲಾಯಿತು.

ಈಗಾಗಲೇ ಗ್ರಾಮ ಪಂಚಾಯತ್ ಕುಡಿಯುವ ನೀರಿನ ಶುಲ್ಕ ಬಾಕಿ ಇರುವವರಿಗೆ ಪಂಚಾಯತ್ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿ ನೋಟಿಸ್ ನೀಡಲಾಗಿದ್ದು ಹಲವರು ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿ ಶುಲ್ಕ ಪಾವತಿಸಿರುತ್ತಾರೆ, ಇನ್ನು ಶುಲ್ಕ ಪಾವತಿಸದ ಗ್ರಾಮದ ಇತರ ಭಾಗಗಳಲ್ಲಿ ನೀರಿನ ಸಂಪರ್ಕ ಮುಂದಿನ ಹಂತದಲ್ಲಿ ಕಡಿತಗೊಳಿಸಲಾಗುವುದು, ಈಗಾಗಲೇ ಮೆಸ್ಕಾಂ ಇಲಾಖೆ ಕುಡಿಯುವ ನೀರಿನ ವಿದ್ಯುತ್ ಸ್ಥಾವರದ ಬಿಲ್ ಪಾವತಿಸಲು ನೋಟಿಸ್ ನೀಡಿದ್ದು ಕುಡಿಯುವ ನೀರಿನ ಬಳಕೆದಾರರು ನಿಗದಿತ ಸಮಯದಲ್ಲಿ ಪಂಚಾಯತ್ ಗೆ ಶುಲ್ಕ ಪಾವತಿಸಿದರೆ ಮೆಸ್ಕಾಂ ಇಲಾಖೆಗೆ ವಿದ್ಯುತ್ ಬಿಲ್ ಪಾವತಿಸಬಹುದು ಎಂದು ಪಂಚಾಯತ್ ಆಡಳಿತ ಮಂಡಳಿ ತಿಳಿಸಿದೆ. ಈಗಾಗಲೇ ಕುಡಿಯುವ ನೀರಿನ ಜೆಜೆಎಂ ಯೋಜನೆಯಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕುಡಿಯುವ ನೀರಿನ ಬಳಕೆದಾರರಿಗೆ ಉಪಯುಕ್ತವಾಗಲಿದೆ. ಕುಡಿಯುವ ನೀರಿಗಾಗಿ ತೆಗೆದುಕೊಂಡ ಕನೆಕ್ಷನ್ ಬೇರೆ ಉದ್ದೇಶಕ್ಕೆ ಬಳಸಿದರೆ ಕನೆಕ್ಷನ್ ಕಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ರೂ.46 ಸಾವಿರ ಆರ್ಥಿಕ ನರೆವು

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

Suddi Udaya
error: Content is protected !!