25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆವರದಿ

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

ಬೆಳ್ತಂಗಡಿ: ಕೇಂದ್ರ ಸರಕಾರ ಉದ್ಧೇಶಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ಪ್ರಕ್ರಿಯೆಯನ್ನು ವಿರೋಧಿಸಿ ಮುಂಡಾಜೆ, ಚಾರ್ಮಾಡಿ, ನೆರಿಯ ಈ‌ ಮೂರು ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಮಸ್ಜಿದ್‌ ಮತ್ತು ಮೊಹಲ್ಲಾಗಳ ಒಗ್ಗೂಡುವಿಕೆಯೊಂದಿಗೆ ಪ್ರತಿಭಟನಾ ಸಭೆಯು ಕಕ್ಕಿಂಜೆ ಪೇಟೆಯಲ್ಲಿ ಜರುಗಿತು.


ಇಲ್ಲಿನ‌ ಹಾರಿಸ್ ಹೊಟೇಲ್ ಬಳಿ‌ ಜಮಾಯಿಸಿದ ಹೋರಾಟಗಾರರು‌ ಸಾರ್ವಜನಿಕ ಸಭೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅಸಂವಿಧಾನಿಕ ವಕ್ಫ್ ತಿದ್ದುಪಡಿ‌ ಮಸೂದೆ ವಿರುದ್ಧ ವಾಟ್ಸ್ ಆಪ್ ಮೂಲಕ ರಚಿತವಾದ ಬಳಗದ ಸಂಯೋಜನೆಯಲ್ಲಿ ಈ ಹೋರಾಟ ಸಂಘಟಿಸಲಾಗಿತ್ತು.


ಇಸ್ಲಾಂ ನಲ್ಲಿ ವಕ್ಫ್ ಎಂದರೆ ಏನು? ವಕ್ಫ್ ಕಾಯ್ದೆಯ ತಿದ್ದುಪಡಿ ಹೇಗೇಗೆ ಆಯ್ತು, ಜಂಟಿ ಸದನ‌ ಸಮಿತಿ ನಡೆದುಕೊಂಡ ರೀತಿಯ ಬಗ್ಗೆ ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ವಿಷಯ ಮಂಡಿಸಿದರು. ಕಾಯ್ದೆಯ ತಿದ್ದುಪಡಿಯ ಲೋಪಗಳೇನೇನು? ಕಾಯ್ದೆ ಬದಲಾವಣೆಯಲ್ಲಿ ಒಳಗೊಂಡಿರುವ ಅಸಂವಿಧಾನಿಕ ಅಂಶಗಳು ಏನೇನು? ಹಾಗೂ ಬದಲಾಗಲಿರುವ ಕಾಯ್ದೆಯಿಂದ ಆಗುವ ತೊಂದರೆಗಳು ಏನು ಎಂಬ ಬಗ್ಗೆ ಯುವ ನ್ಯಾಯವಾದಿ ನವಾಝ್ ಶರೀಫ್ ಅರೆಕ್ಕಲ್ ಮಾತನಾಡಿದರು.


ಸಾಮಾಜಿಕ ಕಾರ್ಯಕರ್ತ ಅಶ್ರಫ್ ಚಾರ್ಮಾಡಿ ಸ್ವಾಗತಿಸಿ ಪ್ರಸ್ತಾವನೆಗೈದರು. ಆರು ಜಮಾಅತ್ ಗಳ ಪದಾಧಿಕಾರಿಗಳು, ಧರ್ಮಗುರುಗಳು, ಜಮಾಅತ್ ಬಾಂಧವರು, ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.
ಬಳಿಕ ಕಕ್ಕಿಂಜೆ ಪೇಟೆಯ ಮೂಲಕ ಗ್ರಾ.ಪಂ ಕಚೇರಿ ವರೆಗೆ ಜಾಥಾ ನಡೆಸಲಾಯಿತು. ಅಲ್ಲಿ ರಾಷ್ಟ್ರಪತಿಗಳಿಗೆ ಗ್ರಾ.ಪಂ ಪಿಡಿಒ‌ ಮೂಲಕ ಮನವಿ ಸಲ್ಲಿಸಲಾಯಿತು. ಅಬ್ದುಲ್ ನಾಸಿರ್ ಕಲ್ಲಗುಡ್ಡೆ ವಂದಿಸಿದರು.
ಕಬೀರ್ ಅರೆಕ್ಕಲ್ ನಿರೂಪಿಸಿದರು. ನಝೀರ್ , ಶರೀಫ್ ಹೆಚ್ ಎ, ಹನೀಫ್ ಕೋಣೆ ಮೊದಲಾದವರು ನಾಯಕತ್ವ ವಹಿಸಿದ್ದರು.

Related posts

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya
error: Content is protected !!